
ಬೆಂಗಳೂರು, (ಆ.02): ಕೇಂದ್ರ ಸರ್ಕಾರವು ರೈತರಿಗೆ ಪಿಎಂಕಿಸಾನ್ ಯೋಜನೆಯಡಿ ವಾರ್ಷಿಕ 6000 ರೂಪಾಯಿ ನೆರವು ನೀಡುವ ಯೋಜನೆಗೆ ಪೂರಕವಾಗಿ ಕರ್ನಾಟಕ ಸರ್ಕಾರವು ಸಹ 4000 ರು. ಘೋಷಿಸಿದೆ.
4000 ರು. ಹಣವನ್ನು ಎರಡು ಕಂತುಗಳಲ್ಲಿ ನೀಡಲು ಯಡಿಯೂರಪ್ಪ ಸರ್ಕಾರ ನಿರ್ಧರಿಸಿದೆ. ಈ ಪೈಕಿ ಮೊದಲ ಕಂತಿನ 2000 ರೂಪಾಯಿಗಳನ್ನು 15-20 ದಿನಗಳೊಳಗೆ ರೈತರಿಗೆ ಪಾವತಿಸಲು ಕ್ರಮ ವಹಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಮೋದಿ 6 ಸಾವಿರ ರೂ.+ ಬಿಎಸ್’ವೈ 4 ಸಾವಿರ ರೂ.= ರೈತರಿಗೆ 10 ಸಾವಿರ ರೂ.!
ಇಂದು (ಶುಕ್ರವಾರ) ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ಕಾರದ ಹಿರಿಯ ಅಧಿಕಾರಿಗಳು, ಪ್ರಾದೇಶಿಕ ಆಯುಕ್ತರು, ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ನಡೆಸಿದರು. ಈ ವೇಳೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಮೊದಲ ದಿನವೇ ಯಡಿಯೂರಪ್ಪ ಅವರು ನೇಕಾರರ ಸಾಲಮನ್ನಾದ ಜತೆಗೆ 'ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್' ಯೋಜನೆಗೆ ಪೂರಕವಾಗಿ ಪ್ರತಿ ರೈತನಿಗೂ ಎರಡು ಕಂತುಗಳಲ್ಲಿ 4000 ರು. ನೀಡಲಾಗುವುದು ಎಂದು ಪ್ರಕಟಿಸಿದ್ದರು.
ಒಟ್ಟಿನಲ್ಲಿ ಬಿಎಸ್ವೈ ಸಿಎಂ ಆಗಿನಿಂದ ಫುಲ್ ಆ್ಯಕ್ಟಿವ್ ಆಗಿದ್ದು, ರಾಜ್ಯ ವಿವಿಧ ವಿಭಾಗದ ಉನ್ನತಾಧಿಕಾರಿಗಳ ಸಭೆ ಮೇಲೆ ಸಭೆ ನಡೆಸಿ ಆಡಳಿತ ಯಂತ್ರಕ್ಕೆ ಚುರುಕು ನೀಡುತ್ತಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.