ಅತೃಪ್ತರ ಗುಂಪು ಬಿಟ್ಟು ಬಂದ ಶಾಸಕನಿಗೆ ಮುಂಬೈನಿಂದ ಬಂತು ಕರೆ

Published : Jul 25, 2019, 11:42 AM ISTUpdated : Jul 25, 2019, 11:52 AM IST
ಅತೃಪ್ತರ ಗುಂಪು ಬಿಟ್ಟು ಬಂದ ಶಾಸಕನಿಗೆ ಮುಂಬೈನಿಂದ ಬಂತು ಕರೆ

ಸಾರಾಂಶ

ಅತೃಪ್ತರ ಗುಂಪು ಬಿಟ್ಟು ವಾಪಸ್ ಆಗಿದ್ದ ಮುಖಂಡಗೆ ಮುಂಬೈನಲ್ಲಿ ಸದ್ಯ ವಾಸ್ತವ್ಯ  ಹೂಡಿರುವ ನಾಯಕರಿಂದ ಕರೆ ಬಂದಿದೆ. ವಾಪಸಾಗುವ ಬಗ್ಗೆ ಸೂಚನೆ ನೀಡಲಾಗಿದೆ.

ಕಾರವಾರ [ಜು.25] : ಅತೃಪ್ತರ ಗುಂಪು  ಬಿಟ್ಟು ಮುಂಬೈನಿಂದ ವಾಪಸಾದ ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ್ ಅವರಿಗೆ ವಾಪಸ್ ಆಗಲು ಸೂಚಿಸಲಾಗಿದೆ. 

ಮುಂಬೈನಲ್ಲಿರುವ ಅತೃಪ್ತ ನಾಯಕರು ಶಿವರಾಮ್ ಹೆಬ್ಬಾರ್ ಅವರಿಗೆ ಕರೆ ಮಾಡಿ ಯಾವಾಗ ವಾಪಸಾಗುತ್ತೀರಿ ಎಂದು ಪ್ರಶ್ನೆ ಮಾಡಿದ್ದು, ಇಂದೇ ಮರಳುವುದಾಗಿ ತಿಳಿಸಿದರು. ಗುರುವಾರ ಸಂಜೆಯ ವೇಳೆ ಮುಂಬೈನಲ್ಲಿ ಇರುವುದಾಗಿ  ಶಿವರಾಮ್ ಹೇಳಿದರು. 

ಅಲ್ಲದೆ ಕರೆ ಸ್ವೀಕರಿಸಿ ಮಾತನಾಡಿದ ಬಳಿಕವೇ ಅವರು ಮನೆಯಿಂದ ಹೊರಟಿದ್ದು, ಎಲ್ಲಿಗೆ ತೆರಳುತ್ತಿದ್ದಾರೆ ಎನ್ನುವ ಯಾವುದೇ ಮಾಹಿತಿ ನೀಡಿಲ್ಲ. ತುರ್ತಾಗಿ ತೆರಳುತ್ತಿರುವುದಾಗಿ ಹೇಳಿದರು. 

ಕರ್ನಾಟಕ ರಾಜಕೀಯದ ಸುದ್ದಿಗೆ ಇಲ್ಲಿ ಕ್ಲಿಕ್ಕಿಸಿ
 
ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನಗೊಂಡು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ 14 ನಾಯಕರೊಂದಿಗೆ ಮುಂಬೈಗೆ ತೆರಳಿದ್ದ ಶಿವರಾಮ್ ಹೆಬ್ಬಾರ್ ದಿಢೀರ್ ಬುಧವಾರ ರಾತ್ರಿ ಮರಳಿದ್ದರು. ಸರ್ಕಾರ ಉಳಿಸಲು ದೋಸ್ತಿ ಪಡೆಯ ನಾಯಕರ ಮನವೊಲಿಸುವ ಯಾವ ಪ್ರಯತ್ನಕ್ಕೂ ಬಗ್ಗದೇ ಅಲ್ಲಿಯೇ ನೆಲೆಸಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪ್ರಾಡಾದಿಂದ ಕೊಲ್ಹಾಪುರಿ ಚಪ್ಪಲಿ ಸೇಲ್‌, ಬೆಲೆ ₹83000!
ಸದನದಲ್ಲಿ ಶಾ ಒತ್ತಡದಲ್ಲಿದ್ರು, ಕೈ ಕಂಪಿಸುತ್ತಿತ್ತು : ರಾಹುಲ್‌