
ಬಾಗಲಕೋಟೆ, [ಅ.21]: ಬಿಕಾನೇರ ರೈಲಿನಲ್ಲಿ ಬಾಂಬ್ ಇದೆ ಎಂಬ ಶಂಕೆ ಹಿನ್ನೆಲೆ ಬಾಗಲಕೋಟೆ ಮತ್ತು ಬೆಳಗಾವಿ ಬಾಂಬ್ ನಿಷ್ಕ್ರಿಯ ದಳ ರೈಲು ಪರಿಶೀಲನೆ ನಡೆಸಿದೆ.
ಯಶವಂತಪುರದಿಂದ ಬಾಗಲಕೋಟೆ ಮಾರ್ಗವಾಗಿ ಬಿಕಾನೇರಕ್ಕೆ ಹೊರಟಿದ್ದ ರೈಲಿನಲ್ಲಿ ಬಾಂಬ್ ಶಂಕೆ ವ್ಯಕ್ತವಾಗಿದೆ. ಇದ್ರಿಂದ ಬಾಗಲಕೋಟೆ ರೈಲು ನಿಲ್ದಾಣದಲ್ಲಿ ಶ್ವಾನದಳ ಹಾಗೂ ಬಾಂಬ್ ನಿಷ್ಕ್ರಿಯ ದಳ ರೈಲು ತಪಾಸಣೆ ನಡೆಸಿದರು.
ಪ್ರಯಾಣಿಕರನ್ನು ಕೆಳಗಿಳಿಸಿ ತೀವ್ರವಾಗಿ ಪರಿಶೀಲನೆ ನಡೆಸಿದ್ದಾರೆ. ಇದ್ರಿಂದ ಬಾಗಲಕೋಟೆ ರೈಲ್ವೆ ನಿಲ್ದಾಣದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾದೆ.ರಕ್ಷಣಾ ವಿಭಾಗದಿಂದ ಕರೆ ಬಂದ ಹಿನ್ನೆಲೆಯಲ್ಲಿ ರೈಲು ಪರಿಶೀಲನೆ ನಡೆಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಸ್ಪಷ್ಟಪಡಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.