
ನವದೆಹಲಿ(ಜ.27): ಸಾಧು ಸಂತರ ಬೀಡು. ಜಗತ್ತಿಗೆ ವೇದಗಳನ್ನು ಕೊಟ್ಟ ನಾಡು. ಅಧ್ಯಾತ್ಮದ ಶಕ್ತಿಯನ್ನು ಪ್ರಪಂಚಕ್ಕೆ ಮನದಟ್ಟು ಮಾಡಿಕೊಟ್ಟ ಮಹನೀಯರ ನೆಲೆ ಭಾರತ.
ಆದರೆ ಭವ್ಯ ಭಾರತ, ಸದೃಢ ಭಾರತ, ಧರ್ಮ ಭಾರತವನ್ನು ಕಟ್ಟಿದ ಸಾಧು ಸಂತರನ್ನು ಈ ದೇಶ ಕಡೆಗಣಿಸುತ್ತಿದೆಯೇ?. ಹೌದು ಎನ್ನುತ್ತಾರೆ ಯೋಗಗುರು ಬಾಬಾ ರಾಮ್ದೇವ್.
ಕಳೆದ 70 ವರ್ಷಗಳಿಂದ ಸಂತ ಸಮುದಾಯದ ಒಬ್ಬ ಸನ್ಯಾಸಿಗೂ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನ ಪುರಸ್ಕಾರ ಲಭಿಸಿಲ್ಲ ಎಂದು ರಾಮ್ದೇವ್ ಖೇದ ವ್ಯಕ್ತಪಡಿಸಿದ್ದಾರೆ.
ಸನ್ಯಾಸಿಗಳಿಗೂ ಭಾರತ ರತ್ನ ನೀಡಬೇಕು ಎಂದು ಆಗ್ರಹಿಸಿರುವ ರಾಮ್ದೇವ್, ಕಳೆದ 70 ವರ್ಷಗಳಲ್ಲಿ ಒಬ್ಬ ಸನ್ಯಾಸಿಯನ್ನೂ ಈ ಪುರಸ್ಕರಕ್ಕೆ ಪರಿಗಣಿಸದಿರುವುದು ದುರಂತ ಎಂದು ಕಿಡಿಕಾರಿದ್ದಾರೆ.
ಮುಂದಿನ ವರ್ಷ ಭಾರತ ರತ್ನ ಪುರಸ್ಕಾರ ನೀಡುವಾಗ ಸನ್ಯಾಸಿ ಒಬ್ಬರನ್ನು ಪರಿಗಣಿಸಬೇಕು ಎಂದು ಆಗ್ರಹಿಸಿರುವ ರಾಮ್ದೇವ್, ಮಹರ್ಷಿ ದಯಾನಂದ ಸರಸ್ವತಿ, ಸ್ವಾಮಿ ವಿವೇಕಾನಂದ ಮತ್ತು ಶ್ರೀ ಶಿವಕುಮಾರ ಸ್ವಾಮೀಜಿ ಅವರ ಹೆಸರನ್ನು ಪರಿಗಣಿಸಬೇಕು ಎಂದು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.