ಕರ್ತವ್ಯದ ಅವಧಿಯಲ್ಲಿ ಸರ್ಕಾರಿ ಅಧಿಕಾರಿಗಳು ಪಾನ್ ಜಗಿಯುವಂತಿಲ್ಲ: ಆದಿತ್ಯನಾಥ್

Published : Mar 22, 2017, 11:22 AM ISTUpdated : Apr 11, 2018, 12:41 PM IST
ಕರ್ತವ್ಯದ ಅವಧಿಯಲ್ಲಿ ಸರ್ಕಾರಿ ಅಧಿಕಾರಿಗಳು ಪಾನ್ ಜಗಿಯುವಂತಿಲ್ಲ: ಆದಿತ್ಯನಾಥ್

ಸಾರಾಂಶ

ಕರ್ತವ್ಯದ ಅವಧಿಯಲ್ಲಿ ಪಾನ್, ಪಾನ್ ಮಸಾಲ ಮತ್ತು ಗುಟ್ಕಾವನ್ನು ಜಗಿಯಬಾರದೆಂದು ರಾಜ್ಯ ಸರ್ಕಾರಿ ನೌಕರರಿಗೆ  ಉತ್ತರ ಪ್ರದೇಶ ನೂತನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್  ಸೂಚಿಸಿದ್ದಾರೆ.

ನವದೆಹಲಿ (ಮಾ.22): ಕರ್ತವ್ಯದ ಅವಧಿಯಲ್ಲಿ ಪಾನ್, ಪಾನ್ ಮಸಾಲ ಮತ್ತು ಗುಟ್ಕಾವನ್ನು ಜಗಿಯಬಾರದೆಂದು ರಾಜ್ಯ ಸರ್ಕಾರಿ ನೌಕರರಿಗೆ  ಉತ್ತರ ಪ್ರದೇಶ ನೂತನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್  ಸೂಚಿಸಿದ್ದಾರೆ.

ಅದೇ ರೀತಿ ಆಸ್ಪತ್ರೆ, ಶಾಲಾ-ಕಾಲೇಜುಗಳಲ್ಲೂ ಕೂಡಾ ತಂಬಾಕು ಉತ್ಪನ್ನಗಳನ್ನು ನಿಷೇಧಿಸಲಾಗಿದೆ. ಸರ್ಕಾರಿ ಕಚೇರಿ ಆವರಣದೊಳಗೆ ತಂಬಾಕು ಉತ್ಪನ್ನಗಳನ್ನು ಬಳಸುವಂತಿಲ್ಲ.

ಇದೇ ಸಂದರ್ಭದಲ್ಲಿ ಚುನಾವಣಾ ಸಂದರ್ಭದಲ್ಲಿ ಹೇಳಿದಂತೆ ಕಸಾಯಿಖಾನೆಯನ್ನು ಮುಚ್ಚಲು ಪೂರ್ವ ತಯಾರಿ ನಡೆಸಿ ಎಂದು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜೊತೆಗೆ ಹಸು ಕಳ್ಳಸಾಗಾಣಿಕೆಯನ್ನು ಸೂಚಿಸಿದ್ದಾರೆ. ಹಾಗೂ ಕಂಬಳಿ ನಿಷೇಧ ಮಾಡುವುದಕ್ಕೂ ಆದೇಶಿಸಿದ್ದಾರೆ.

ಅನುಮತಿಯಿಲ್ಲದೇ ಅಕ್ರಮವಾಗಿ ನಡೆಸುತ್ತಿದ್ದ ಅಲಹಾಬಾದ್, ವಾರಣಾಸಿಯಲ್ಲಿನ ಕಸಾಯಿಖಾನೆಯನ್ನು  ಈಗಾಗಲೇ ಮುಚ್ಚಲಾಗಿದೆ. ಈ ಬಗ್ಗೆ ರಾಜ್ಯಾದ್ಯಂತ ತನಿಖೆ ನಡೆಸಲಾಗುತ್ತಿದೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

2026ರಲ್ಲಿ ಚಿನ್ನದ ಬೆಲೆ ಎಷ್ಟಾಗುತ್ತೆ ಗೊತ್ತಾ? ವರ್ಲ್ಡ್ ಗೋಲ್ಡ್ ಕೌನ್ಸಿಲ್ ಸಿಇಒ ಲೆಕ್ಕಾಚಾರಕ್ಕೆ ಬೆಚ್ಚಿದ ಜನ
ದುಬೈನಲ್ಲಿ ಮಿಂಚು, ಗುಡುಗು, ರಣ ರಣ ಮಳೆ: ಸೌದಿ ನೆಲದಲ್ಲಿ ಹಿಮಪಾತ.. ಇದೆಂಥಾ ಅಚ್ಚರಿ? ಏನು ಕಾರಣ..?