ಏಕರೂಪ ನಾಗರಿಕ ಸಂಹಿತೆ ಜಾರಿಗೆ ಯೋಗಿ ಆದಿತ್ಯನಾಥ್ ಆಗ್ರಹ

Published : Apr 17, 2017, 09:17 AM ISTUpdated : Apr 11, 2018, 12:42 PM IST
ಏಕರೂಪ ನಾಗರಿಕ ಸಂಹಿತೆ ಜಾರಿಗೆ ಯೋಗಿ ಆದಿತ್ಯನಾಥ್ ಆಗ್ರಹ

ಸಾರಾಂಶ

'ಕೆಲವರು ತಲಾಖ್'ನಿಂದ ಮುಸ್ಲಿಂ ಮಹಿಳೆಯರಿಗೆ ಆಗುತ್ತಿರುವ ಅನ್ಯಾಯದ ದನಿಯತ್ತುತ್ತಿಲ್ಲ. ಶೋಷಣೆಯ ವಿರುದ್ಧ ಮಾತನಾಡದವರು ಕೂಡ ಸಮಾನ ಅಪರಾಧಿಗಳು. ತ್ರಿವಳಿ ತಲಾಖ್'ಅನ್ನು ರದ್ದುಗೊಳಿಸಿ ದೇಶದಲ್ಲಿ  ಒಂದೇ ರೀತಿಯ ಕಾನೂನನ್ನು ಜಾರಿಗೊಳಿಸಬೇಕೆಂದು ಪುನರುಚ್ಚರಿಸಿದರು.

ಲಖನೌ(ಏ.17): ಮುಸ್ಲಿಂ ಮಹಿಳೆಯರನ್ನು ಶೋಷಣೆಗೊಳಪಡಿಸುತ್ತಿರುವ ತಲಾಖ್ ಕಾನೂನುನ್ನುಅಂತ್ಯಗೊಳಿಸಿ ದೇಶದಲ್ಲಿ ಸಮಾನ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೊಳಿಸಬೇಕೆಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆಗ್ರಹಿಸಿದ್ದಾರೆ.

'ಕೆಲವರು ತಲಾಖ್'ನಿಂದ ಮುಸ್ಲಿಂ ಮಹಿಳೆಯರಿಗೆ ಆಗುತ್ತಿರುವ ಅನ್ಯಾಯದ ದನಿಯತ್ತುತ್ತಿಲ್ಲ. ಶೋಷಣೆಯ ವಿರುದ್ಧ ಮಾತನಾಡದವರು ಕೂಡ ಸಮಾನ ಅಪರಾಧಿಗಳು. ತ್ರಿವಳಿ ತಲಾಖ್'ಅನ್ನು ರದ್ದುಗೊಳಿಸಿ ದೇಶದಲ್ಲಿ  ಒಂದೇ ರೀತಿಯ ಕಾನೂನನ್ನು ಜಾರಿಗೊಳಿಸಬೇಕೆಂದು ಪುನರುಚ್ಚರಿಸಿದರು.

ನಿನ್ನೆಯಷ್ಟೆ ಪ್ರಧಾನಿ ನರೇಂದ್ರ ಮೋದಿ ಕೂಡ ತಲಾಖ್'ನಿಂದ ಆಗುತ್ತಿರುವ  ಅನ್ಯಾಯಗಳ ಬಗ್ಗೆ  ಮಾತನಾಡಿ, ನಮ್ಮ ಮುಸ್ಲಿಂ ಸಹೋದರಿಯರು ಇದರಿಂದ ತೊಂದರೆಗೊಳಗಾಗುತ್ತಿದ್ದಾರೆ. ಈ ರೀತಿಯ ಕೆಟ್ಟ ಸಾಮಾಜಿಕ ನಡವಳಿಕೆಯನ್ನು ಕೊನೆಗೊಳಿಸಬೇಕಾಗಿದೆ'ಎಂದು ತಿಳಿಸಿದ್ದರು.

ಆದರೆ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಮಾತ್ರ, ತ್ರಿವಳಿ ತಲಾಖ್'ಅನ್ನು ರದ್ದುಗೊಳಿಸಲು ಸಾಧ್ಯವಿಲ್ಲ'. ಷರಿಯಾ ಕಾನೂನಿನ ವಿರುದ್ಧವಾಗಿ ತಲಾಖ್ ದುರ್ಬಳಕೆಯಾದರೆ ಮಾತ್ರ ಬಹಿಷ್ಕರಿಸಲು ಅವಕಾಶವಿದೆ'ಎಂದು ತಿಳಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಟಾಟಾದ ತಾಜ್‌, ಐಟಿಸಿಗೆ ಅದಾನಿ ಗ್ರೂಪ್ ಟಕ್ಕರ್, ಐಷಾರಾಮಿ ಹೋಟೆಲ್‌ ಉದ್ಯಮಕ್ಕೆ ಎಂಟ್ರಿ, ಏರ್ಪೋರ್ಟ್‌ಗಳೇ ಟಾರ್ಗೆಟ್!
ಬೆಂಗಳೂರು ಕಾಲೇಜಿನಲ್ಲಿ ಹಾಜರಾತಿ ಹಗರಣ; ಅಲಯನ್ಸ್ ವಿವಿ ದೂರು, 6 ಜನರ ವಿರುದ್ಧ ಎಫ್‌ಐಆರ್!