
ಲಕ್ನೋ (ಡಿ.15): ಉತ್ತರ ಪ್ರದೇಶದಲ್ಲಿ ಯಾವುದೇ ರೀತಿಯಾದ ಕಾರ್ಯಕ್ರಮ ನಡೆದರೂ ಕೂಡ ಅಲ್ಲಿನ ಮೆನುವಿನಲ್ಲಿ ಸಸ್ಯಹಾರಗಳಿಗೆ ಪ್ರಾಮುಖ್ಯತೆ ನೀಡಲಾಗುತ್ತಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸಸ್ಯಹಾರಿಯಾಗಿರುವ ನಿಟ್ಟಿನಲ್ಲಿ ಎಲ್ಲಾ ಕಡೆಯೂ ಕೂಡ ಸಸ್ಯಹಾರಕ್ಕೆ ಹೆಚ್ಚು ಒತ್ತು ನೀಡಲಾಗುತ್ತಿದೆ.
ಮೊದಲ ಬಾರಿಗೆ ಇಲ್ಲಿ ಗುರುವಾರದಿಂದ ಆರಂಭವಾಗಿರುವ ಐಎಎಸ್ ಅಧಿಕಾರಿಗಳ ಸಮ್ಮೇಳನದ ಆಹಾರದ ಮೆನುವಿನಲ್ಲಿ ಚಿಕನ್, ಮಟನ್, ಮೀನಿನ ಖಾದ್ಯಗಳನ್ನೂ ಮೆನುವಿನಿಂದ ಹೊರಕ್ಕಿಡಲಾಗಿದೆ.
ಈ ಹಿಂದೆ ಸರ್ಕಾರದಿಂದ ನಡೆಯುವ ಯಾವುದೇ ಕಾರ್ಯಕ್ರಮ ಇರಲಿ ಅಲ್ಲಿ ಸಸ್ಯಹಾರಾ ಹಾಗೂ ಮಾಂಸಹಾರಗಳಿಗೆ ಒತ್ತು ನೀಡಲಾಗುತ್ತಿತ್ತು. ಆದರೆ ಇದೀಗ ಯೋಗಿ ಆದಿತ್ಯನಾಥ್ ಅವರು ಮುಖ್ಯಮಂತ್ರಿಯಾದ ಬಳಿಕ ಸರ್ಕಾರದ ಕಾರ್ಯಕ್ರಮದಲ್ಲಿ ಮಾಂಸಾಹಾರಗಳನ್ನೂ ಹೊರಗಿಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.