
ಲಖನೌ(ಮಾ.23): ಉತ್ತರ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಜಾರಿಗೊಳಿಸುವಲ್ಲಿ ವಿಫಲರಾಗುವ ಪೊಲೀಸ್ ಸಿಬ್ಬಂದಿ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂಬ ಸಂದೇಶ ರವಾನಿಸಲಾಗಿದೆ.
ಅಲ್ಲಿನ ಸಿಎಂ ಯೋಗಿ ಆದಿತ್ಯನಾಥ್'ರ ನೂತನ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ 100ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಿ, ಕರ್ತವ್ಯ ಲೋಪ ಎಸಗುವ ಸಿಬ್ಬಂದಿಗೆ ಎಚ್ಚರಿಕೆ ನೀಡಲಾಗಿದೆ.
ಗಾಜಿಯಾಬಾದ್, ಮೇರಠ್ ಮತ್ತು ನೋಯ್ಡಾದಲ್ಲಿ ಅತ್ಯಧಿಕ ಅಮಾನತುಗಳು ನಡೆದಿವೆ. ಲಖನೌನಲ್ಲಿ ಏಳು ಪೊಲೀಸ್ ಇನ್ಸ್ಪೆಕ್ಟರ್ಗಳನ್ನು ಅಮಾನತುಗೊಳಿಸಲಾಗಿದೆ.
ದುರ್ನಡತೆಯ ಸಿಬ್ಬಂದಿಯನ್ನು ಗುರುತಿಸಿ ಅವರ ವಿರುದ್ಧ ಕ್ರಮ ಕೈಗೊಳ್ಳಲು ಡಿಜಿಪಿಯವರು ನೀಡಿದ್ದ ಆದೇಶದ ಮೇರೆಗೆ, 100ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.