ಬದಲಾಗಲಿದೆ ರಾಮಜನ್ಮ ಭೂಮಿ ಅಯೋಧ್ಯೆ

Published : Aug 02, 2018, 07:53 AM IST
ಬದಲಾಗಲಿದೆ ರಾಮಜನ್ಮ ಭೂಮಿ ಅಯೋಧ್ಯೆ

ಸಾರಾಂಶ

ರಾಮಜನ್ಮ ಭೂಮಿ ಪ್ರದೇಶವಾದ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿದೆ ಅತ್ಯಂತ ಭವ್ಯವಾದ ನವ್ಯ ಅಯೋಧ್ಯ ನಗರ. ಇದಕ್ಕೆ ಯೋಗಿ ಆದಿತ್ಯನಾಥ ಸರ್ಕಾರ ಹಲವಯ ಯೋಜನೆಗಳನ್ನು ಕೈಗೊಳ್ಳುತ್ತಿದೆ.

ಫೈಜಾಬಾದ್: ಉತ್ತರ ಪ್ರದೇಶ ಮುಖ್ಯ ಮಂತ್ರಿ ಯೋಗಿ ಆದಿತ್ಯನಾಥ್ ರಾಮಜನ್ಮ ಭೂಮಿ ಅಯೋಧ್ಯೆ ಯನ್ನು ಇನ್ನಷ್ಟು ಆಕರ್ಷಣೆಯ ತಾಣವನ್ನಾಗಿ ಮಾಡಲು ಹೊರಟಿದ್ದಾರೆ. ರಾಮಜನ್ಮ ಭೂಮಿಯಿಂದ ಕೇವಲ 10 ಕಿ.ಮೀ. ದೂರದಲ್ಲಿ ‘ನವ್ಯ ಅಯೋಧ್ಯಾ ನಗರ’ ಎಂಬ ಐಷಾರಾಮಿ ನಗರ ನಿರ್ಮಿಸಲು ಸರ್ಕಾರ ನಿರ್ಧರಿಸಿದೆ.

ರಾಜ್ಯ ಪ್ರವಾಸೋದ್ಯಮ ಇಲಾಖೆ ಈ ಸಂಬಂಧ ಸರ್ಕಾರಕ್ಕೆ ಪ್ರಸ್ತಾಪ ಕಳಿಸಿದೆ. ಯೋಜನೆಗಾಗಿ 500 ಎಕರೆ ಜಮೀನನ್ನು ಭೂಸ್ವಾಧೀನಕ್ಕೆ ಗುರುತಿಸಲಾಗಿದೆ. ಸರಯೂ ನದಿ ದಂಡೆಯ ಮೇಲೆ ನಗರವು ನಿರ್ಮಾಣ ಗೊಳ್ಳಲಿದೆ. 

ಲಂಡನ್ ಮಾದರಿಯ ಸುಸಜ್ಜಿತ ರಸ್ತೆ, ಒಳಚರಂಡಿ, ಹೋಟೆಲ್, ವಿದ್ಯುತ್ ವ್ಯವಸ್ಥೆ, ಬೃಹತ್ ವಾಣಿಜ್ಯಿಕ ಹಾಗೂ ವಸತಿ ಸಂಕೀರ್ಣ ಗಳು, ನದಿ ಪಕ್ಕ ರೆಸಾರ್ಟ್, ಪಂಚತಾರಾ ಹೋಟೆಲ್‌ಗಳು ತಲೆಯೆತ್ತ ಲಿವೆ. ‘ಹಳೇ ಅಯೋಧ್ಯಾ ನಗರಿಯು ತುಂಬಾ ಇಕ್ಕಟ್ಟಾಗಿದೆ. ಅದೇ ನಗರವನ್ನು ಸುಧಾರಿಸಿ ಅಭಿವೃದ್ಧಿಪಡಿಸಲು ಆಗುವುದಿಲ್ಲ. ಹೀಗಾಗಿ ಹೊಸ ಅಯೋಧ್ಯಾ ನಗರವನ್ನು ಸ್ಥಾಪಿಸುತ್ತಿದ್ದೇವೆ. ವರ್ಷಾಂತ್ಯದೊಳಗೆ ಕಾಮಗಾರಿ ಆರಂಭವಾಗಲಿದೆ’ ಎಂದು ಫೈಜಾಬಾದ್ ಜಿಲ್ಲಾಧಿಕಾರಿ ಅನಿಲ್ ಕುಮಾರ್ ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸದನದಲ್ಲಿ Siddaramaiah vs Arvind Bellad ಒಳಮೀಸಲು ಹೆಚ್ಚಳ ಜಟಾಪಟಿ! ಯತ್ನಾಳ್‌ಗೆ ಸಿಎಂ ಸಂವಿಧಾನ ಪಾಠ
ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!