30 ಮಕ್ಕಳ ಸಾವು: ತನಿಖೆಗೆ ಯೋಗಿ ಸರ್ಕಾರ ಆದೇಶ

Published : Aug 12, 2017, 11:33 AM ISTUpdated : Apr 11, 2018, 01:00 PM IST
30 ಮಕ್ಕಳ ಸಾವು: ತನಿಖೆಗೆ ಯೋಗಿ ಸರ್ಕಾರ ಆದೇಶ

ಸಾರಾಂಶ

ಗೋರಖ್’ಪುರದ ಆಸ್ಪತ್ರೆಯಲ್ಲಿ ಆಕ್ಸಿಜನ್​ ಕೊರತೆಯಿಂದ 30 ಮಕ್ಕಳು ಸಾವನ್ನಪ್ಪಿರುವ ಘಟನೆಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತನಿಖೆಗೆ ಆದೇಶಿಸಿದ್ದಾರೆ. ಯೋಗಿ ಆದಿತ್ಯನಾಥ್​ ಪ್ರತಿನಿಧಿಸುತ್ತಿದ್ದ ಕ್ಷೇತ್ರ ಗೋರಖ್​'ಪುರ್​ನಲ್ಲಿರುವ ಅತಿದೊಡ್ಡ ಆಸ್ಪತ್ರೆ ಬಾಬಾ ರಾಘವದಾಸ್​ ಮೆಡಿಕಲ್​​​ ಕಾಲೇಜು ಆಸ್ಪತ್ರೆಯಲ್ಲಿ ಈ ದುರ್ಘಟನೆ ಸಂಭವಿಸಿದ್ದು 48 ಗಂಟೆಗಳ ಅವಧಿಯಲ್ಲಿ 30 ಮಕ್ಕಳು ಮೃತಪಟ್ಟಿದ್ದಾರೆ.

ನವದೆಹಲಿ: ಗೋರಖ್’ಪುರದ ಆಸ್ಪತ್ರೆಯಲ್ಲಿ ಆಕ್ಸಿಜನ್​ ಕೊರತೆಯಿಂದ 30 ಮಕ್ಕಳು ಸಾವನ್ನಪ್ಪಿರುವ ಘಟನೆಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತನಿಖೆಗೆ ಆದೇಶಿಸಿದ್ದಾರೆ.

ಯೋಗಿ ಆದಿತ್ಯನಾಥ್​ ಪ್ರತಿನಿಧಿಸುತ್ತಿದ್ದ ಕ್ಷೇತ್ರ ಗೋರಖ್​'ಪುರ್​ನಲ್ಲಿರುವ ಅತಿದೊಡ್ಡ ಆಸ್ಪತ್ರೆ ಬಾಬಾ ರಾಘವದಾಸ್​ ಮೆಡಿಕಲ್​​​ ಕಾಲೇಜು ಆಸ್ಪತ್ರೆಯಲ್ಲಿ ಈ ದುರ್ಘಟನೆ ಸಂಭವಿಸಿದ್ದು 48 ಗಂಟೆಗಳ ಅವಧಿಯಲ್ಲಿ 30 ಮಕ್ಕಳು ಮೃತಪಟ್ಟಿದ್ದಾರೆ.

ಬಿಆರ್​ಡಿ ಆಸ್ಪತ್ರೆಗೆ ಖಾಸಗಿ ಕಂಪನಿಯೊಂದು ಗುತ್ತಿಗೆ ಆಧಾರದ ಮೇಲೆ ಆಕ್ಸಿಜನ್ ಸಿಲಿಂಡರ್​​ನ್ನು ಒದಗಿಸುತ್ತಿತ್ತು. ಈ ಮಧ್ಯೆ ಸುಮಾರು 60 ಲಕ್ಷ ರೂ.ಬಾಕಿ ಮೊತ್ತವನ್ನು ಪಾವತಿಸದೇ ಇದ್ದಿದ್ದಕ್ಕೆ ಆಕ್ಸಿಜನ್​ ಪೂರೈಕೆಯಾಗದೇ ಮಕ್ಕಳು ಸಾವನ್ನಪ್ಪಿದ್ದಾರೆಂದು ಶಂಕಿಸಲಾಗಿದೆ.

ಯೋಗಿ ಭೇಟಿಯಾಗಿ ಚರ್ಚೆ ನಡೆಸಿದ ಬಳಿಕ ಮಾತನಾಡಿದ ಆರೋಗ್ಯ ಸಚಿವ ಸಿದ್ಧಾರ್ಥ ನಾಥ್, ಮಕ್ಕಳ ಸಾವಿಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.

ದುರಂತವಲ್ಲ, ಹತ್ಯಾಕಾಂಡ: ಕೈಲಾಶ್ ಸತ್ಯಾರ್ಥಿ:

 

ಘಟನೆಗೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಹರಿಹಾಯ್ದಿರುವ ನೊಬೆಲ್ ಪ್ರಶಸ್ತಿ ವಿಜೇತ ಕೈಲಾಶ್ ಸತ್ಯಾರ್ಥಿ, ಇದು ದುರಂತವಲ್ಲ, ಹತ್ಯಾಕಾಂಡವೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಕ್ಕಳಿಗೆ 70 ವರ್ಷದ ಸ್ವಾತಂತ್ರ್ಯವೆಂದರೆ ಇದೇನಾ? ಎಂದು ಪ್ರಶ್ನಿಸಿರುವ ಸತ್ಯಾರ್ಥಿ, ಭ್ರಷ್ಟ ವೈದ್ಯಕೀಯ ವ್ಯವಸ್ಥೆಯನ್ನು ಸರಿಪಡಿಸುವಂತೆ ಯೋಗಿ ಆದಿತ್ಯನಾಥ್’ಗೆ ಮನವಿ ಮಾಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೇರಳದಲ್ಲಿ ಉತ್ತರ ಭಾರತದ ಕಾರ್ಮಿಕನ ಮೇಲೆ ಗುಂಪು ಹತ್ಯೆ, 'ಆತನ ದೇಹದ ಮೇಲೆ ಗಾಯವಾಗದ ಪಾರ್ಟ್‌ಗಳೇ ಇಲ್ಲ' ಎಂದ ವೈದ್ಯರು!
ಅಂತರಾಷ್ಟ್ರೀಯ ವೇದಿಕೆಯಲ್ಲಿ ಕನ್ನಡದ ಡಿಂಡಿಮ: ವಿದೇಶಿ ಕಲಾಪ್ರೇಮಿಗಳ ಮನಗೆದ್ದ ಈ ಕನ್ನಡ ಕ್ಯಾಲಿಗ್ರಫಿ ಸಾಧಕ ಯಾರು?