
ನವದೆಹಲಿ (ನ. 03): ವಿರೋಧ, ಪ್ರತಿರೋಧ, ಟೀಕೆಗಳ ನಡುವೆಯೂ ಕೇಂದ್ರ ಸರಕಾರವು ಗುಜರಾತ್ನಲ್ಲಿ ಭಾರತದ ಉಕ್ಕಿನ ಮನುಷ್ಯ ಸರದಾರ್ ವಲ್ಲಭಭಾಯಿ ಪಟೇಲ್ ಅವರ ಬೃಹತ್ ಪ್ರತಿಮೆಯನ್ನ ಅನಾವರಣಗೊಳಿಸಿದೆ.
ಇದರ ಬೆನ್ನಲ್ಲೇ ಈಗ ಉತ್ತರ ಪ್ರದೇಶದಲ್ಲಿ ಶ್ರೀ ರಾಮನ ಪುತ್ಥಳಿಯನ್ನು ನಿರ್ಮಿಸಲು ಯೋಗಿ ಆದಿತ್ಯನಾಥ್ ಸರಕಾರ ಯೋಜಿಸಿದೆ.
ಮಾಧ್ಯಮಗಳಿಗೆ ಸಿಕ್ಕಿರುವ ಮಾಹಿತಿಯಂತೆ ಸರಯೂ ನದಿ ದಂಡೆಯಲ್ಲಿ 100 ಮೀಟರ್ಗೂ ಅಧಿಕ ಎತ್ತರದ ರಾಮನ ಪ್ರತಿಮೆ ನಿರ್ಮಾಣ ಮಾಡವ ಪ್ಲ್ಯಾನ್ ಇದೆ ಎಂದು ಹೇಳಲಾಗುತ್ತಿದೆ.
ಅದರಲ್ಲೂ ಮುಖ್ಯವಾಗಿ ಶ್ರೀರಾಮನ ಪ್ರತಿಮೆಯನ್ನ ಅಯೊದ್ಯದಲ್ಲಿಯೇ ನಿರ್ಮಿಸಲು ಯೋಗಿ ಸರ್ಕಾರ ಪ್ಲ್ಯಾನ್ ಮಾಡಿದೆ ಎಂದು ಹೇಳಲಾಗುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ