ಮಹಾಭಾರತದ ಸಂಧಾನವೂ ವಿಫಲವಾಗಿತ್ತು: ಯೋಗಿ ಆದಿತ್ಯನಾಥ್!

Published : Aug 03, 2019, 08:27 PM IST
ಮಹಾಭಾರತದ ಸಂಧಾನವೂ ವಿಫಲವಾಗಿತ್ತು: ಯೋಗಿ ಆದಿತ್ಯನಾಥ್!

ಸಾರಾಂಶ

‘ಮಹಾಭಾರತದ ಸಂಧಾನ ಪ್ರಯತ್ನವೂ ವಿಫಲವಾಗಿತ್ತು’| ಅಯೋಧ್ಯೆ ಕುರಿತು ಮಾರ್ಮಿಕ ಹೇಳಿಕೆ ನೀಡಿದ ಉತ್ತರಪ್ರದೇಶ ಮುಖ್ಯಮಂತ್ರಿ| ಸುಪ್ರೀಂಕೋರ್ಟ್ ಸಂಧಾನ ಸಮಿತಿ ಪ್ರಯತ್ನ ಶ್ಲಾಘಿಸಿದ ಯೋಗಿ ಆದಿತ್ಯನಾಥ್| ಅಯೋಧ್ಯೆ ವಿವಾದ ಕೋರ್ಟ್’ನಲ್ಲೇ ಬಗೆಹರಿಯಲಿ ಎಂದ ಯೋಗಿ| ಆ.06ರಿಂದ ಅಯೋಧ್ಯೆ ವಿವಾದ ಪ್ರಕರಣದ ಪ್ರತಿದಿನ ವಿಚಾರಣೆ|

ಲಕ್ನೋ(ಆ.03): ಅಯೋಧ್ಯೆ ರಾಮಜನ್ಮಭೂಮಿ ವಿವಾದ ಶಮನಕ್ಕೆ ಸುಪ್ರೀಂಕೋರ್ಟ್ ಸಂಧಾನ ಸಮಿತಿ ವಿಫಲವಾದ ಹಿನ್ನೆಲೆಯಲ್ಲಿ, ಮಹಾಭಾರತದ ಸಂಧಾನವೂ ವಿಫಲವಾಗಿತ್ತು ಎಂದು ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಮಾರ್ಮಿಕವಾಗಿ ಹೇಳಿದ್ದಾರೆ.

ಸುಪ್ರೀಂಕೋರ್ಟ್ ಸಂಧಾನ ಸಮಿತಿಯ ಪ್ರಯತ್ನವನ್ನು ಶ್ಲಾಘಿಸಿರುವ ಯೋಗಿ, ಮಹಾಭಾರತ ಯುದ್ಧಕ್ಕೂ ಮೊದಲು ಇಂತದ್ದೇ ಸಂಧಾನ ನಡೆಸಲು ವಿಫಲ ಪ್ರಯತ್ನ ನಡೆಸಲಾಗಿತ್ತು ಎಂದು ಹೇಳಿದ್ದಾರೆ.

ಅಯೋಧ್ಯೆ ವಿವಾದವನ್ನು ನ್ಯಾಯಾಲಯದ ಹೊರಗೆ ಬಗೆಹರಿಸುವ ಪ್ರಯತ್ನದ ಭಾಗವಾಗಿ ಸುಪ್ರೀಂಕೋರ್ಟ್ ಸಂಧಾನ ಸಮಿತಿಯನ್ನು ರಚಿಸಿತ್ತು. ಆದರೆ ಸಂಧಾನಕ್ಕೆ ಬರಲು ಎರಡೂ ಪಕ್ಷಗಳು ನಿರಾಕರಿಸಿದ ಹಿನ್ನೆಲೆಯಲ್ಲಿ ಇದೇ ಆ.06 ರಿಂದ ಅಯೋಧ್ಯೆ ವಿವಾದದ ಕುರಿತು ಪ್ರತಿದಿನ ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ನಿರ್ಣಯಿಸಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವೃತ್ತಿಪರತೆ ಅಂತ್ಯಸಂಸ್ಕಾರ, ಪ್ರಶ್ನೆ ಕೇಳಿದ ಪತ್ರಕರ್ತೆಗೆ ಕಣ್ಣು ಹೊಡೆದ ಪಾಕಿಸ್ತಾನ ಸೇನಾ ಲೆ.ಜನರಲ್
ರೀಲ್ಸ್‌ ನೋಡಿ ನೋಡಿ, ಗಂಡ ಮಕ್ಕಳ ಬಿಟ್ಟು ಸೋಶಿಯಲ್ ಮೀಡಿಯಾ ಗೆಳೆಯನಿಗಾಗಿ ಬಸ್ ಹತ್ತಿದ ಮಹಿಳೆ