
ಲಕ್ನೋ (ಮಾ.19): ಉತ್ತರ ಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್ ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಇಲ್ಲಿನ ಸ್ಮೃತಿ ಉಪವನ ನಡೆದ ಸಮಾರಂಭದಲ್ಲಿ ರಾಜ್ಯಪಾಲ ರಾಮ್ ನಾಯಕ್ ಯೋಗಿ ಆದಿತ್ಯನಾಥ್'ಗೆ ಪ್ರಮಾಣ ವಚನ ಬೋಧಿಸಿದ್ದಾರೆ.
ಆದಿತ್ಯನಾಥ್ ಜತೆಗೆ, ಬಿಜೆಪಿ ರಾಜ್ಯಾಧ್ಯಕ್ಷ ಕೇಶವ್ ಪ್ರಸಾದ್ ಮೌರ್ಯ, ಹಾಗೂ ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷ ದಿನೇಶ್ ಶರ್ಮಾ ಉಪ-ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. 43 ಮಂದಿ ಸಚಿವರು ಕೂಡಾ ಈ ಸಂದರ್ಭದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಕೇಂದ್ರ ಸಚಿವರುಗಳಾದ ರಾಜನಾಥ್ ಸಿಂಗ್, ಉಮಾ ಭಾರತಿ ಹಾಗೂ ನಿತೀನ್ ಗಡ್ಕರಿ ಮೊದಲಾದವರು ಭಾಗವಹಿಸಿದ್ದರು.
ಬಿಜೆಪಿ ಮುಖ್ಯಮಂತ್ರಿಗಳ ಪೈಕಿ ಮಹಾರಾಷ್ಟ್ರದ ದೇವೇಂದ್ರ ಫಡ್ನವಿಸ್, ಗೋವಾದ ಮನೋಹರ್ ಪರ್ರಿಕರ್, ಛತ್ತೀಸ್'ಗಡದ ರಮಣ್ ಸಿಂಗ್, ಮಧ್ಯಪ್ರದೇಶದ ಶಿವರಜ್ ಸಿಂಗ್ ಚೌಹಾಣ್ ಹಾಗೂ ಆಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಭಾಗವಹಿಸಿದ್ದರು.
ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ ಕೂಡಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.