
ನವದೆಹಲಿ (ಅ.17): ತಾಜ್’ಮಹಲ್ ಕುರಿತು ಬಿಜೆಪಿ ಶಾಸಕ ಸಂಗೀತ್ ಸೋಮ್ ಹೇಳಿಕೆಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರತಿಕ್ರಿಯೆ ನೀಡಿದ್ದಾರೆ. ತಾಜ್’ಮಹಲನ್ನು ಭಾರತೀಯ ಕಾರ್ಮಿಕರ ರಕ್ತ ಮತ್ತು ಬೆವರಿನಿಂದ ನಿರ್ಮಿಸಲಾಗಿದೆ ಎಂದು ಯೋಗಿ ಹೇಳಿದ್ದಾರೆ.
ತಾಜ್’ಮಹಲನ್ನು ಯಾರು ಕಟ್ಟಿದರು? ಯಾವ ಕಾರಣಕ್ಕಾಗಿ ಕಟ್ಟಿದರು ಎನ್ನುವುದೆಲ್ಲಾ ವಿಚಾರವಲ್ಲ. ಇದನ್ನು ಭಾರತೀಯ ಕಾರ್ಮಿಕರ ರಕ್ತ ಹಾಗೂ ಬೆವರಿನ ಶ್ರಮವಿದೆ ಎಂದು ಯೋಗಿ ಹೇಳಿದ್ದಾರೆ.
ಪ್ರವಾಸೋದ್ಯಮ ದೃಷ್ಟಿಯಿಂದ ತಾಜ್’ಮಹಲ್ ಪ್ರಮುಖ ಆಕರ್ಷಣೀಯ ಕೇಂದ್ರ. ಅಲ್ಲಿಗೆ ಬರುವ ಪ್ರವಾಸಿಗರಿಗೆ ಭದ್ರತೆ ಮತ್ತು ಸಕಲ ಸೌಲಭ್ಯ ನೀಡಲು ನಮ್ಮ ಸರ್ಕಾರ ಆದ್ಯತೆ ನೀಡಿದೆ ಎಂದು ಹೇಳಿದ್ದಾರೆ.
ಇದೇ ತಿಂಗಳ 25 ರಂದು ಯೋಗಿ ಆದಿತ್ಯನಾಥ್ ಆಗ್ರಾಗೆ ಭೇಟಿ ನೀಡಲಿದ್ದು ತಾಜ್’ಮಹಲ್’ಗೂ ಭೇಟಿ ನೀಡಲಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.