
ಲಕ್ನೋ(ಜು.23): ನೇತಾಜಿ ಸುಭಾಷ್ ಚಂದ್ರ ಬೋಸ್ ಎಂದು ನಂಬಲಾದ ಗುಮ್ನಾನಿ ಬಾಬಾ ರಹಸ್ಯ ಅರಿಯಲು ರಚನೆಯಾಗಿದ್ದ ನ್ಯಾ. ವಿಷ್ಣು ಸಹಾಯ್ ನೇತೃತ್ವದ ಆಯೋಗದ ವರದಿಯನ್ನು ಉತ್ತರ ಪ್ರದೇಶ ಸಚಿವ ಸಂಪುಟದಲ್ಲಿ ಇಂದು ಮಂಡಿಸಲಾಗಿದೆ .
1985 ರವರೆಗೆ ಫೈಜಾಬಾದ್ನಲ್ಲಿ ವಾಸಿಸುತ್ತಿದ್ದ ಗುಮ್ನಾಮಿ ಬಾಬಾ ಅಲಿಯಾಸ್ ಭಗವಾಂಜಿ, ನಿಜವಾಗಿ ನೇತಾಜಿ ಸುಭಾಸ್ ಚಂದ್ರ ಬೋಸ್ ಆಗಿದ್ದರೆ? ಎನ್ನುವ ಕುರಿತಂತೆ ಈ ವರದಿ ಸ್ಪಷ್ಟನೆ ನಿಡಲಿದೆ.
ಇನ್ನು ಈ ವರದಿಯನ್ನು ಉತ್ತರ ಪ್ರದೇಶ ಸರ್ಕಾರ ಮುಂದಿನ ವಿಧಾನಸಭೆ ಅಧಿವೇಶನದಲ್ಲಿ ಮಂಡಿಸಲಿದ್ದು, ಗುಮ್ನಾನಿ ಬಾಬಾ ಕುರಿತಾದ ಎಲ್ಲಾ ಊಹಾಪೋಹಗಳಿಗೆ ಶೀಘ್ರವೇ ತೆರೆ ಬೀಳಲಿದೆ.
ನ್ಯಾಯಮೂರ್ತಿ ವಿಷ್ಣು ಸಹಾಯ್ ನೇತೃತ್ವದ ಆಯೋಗದ ವರದಿಯನ್ನು ವಿಧಾನಸಭೆಯಲ್ಲಿ ಮಂಡಿಸುವ ಪ್ರಸ್ತಾಪಕ್ಕೆ ಯೋಗಿ ಆದಿತ್ಯನಾಥ್ ನೇತೃತ್ವದ ಸಂಪುಟ ಒಪ್ಪಿಗೆ ನೀಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.