
ಲಕ್ನೋ (ಆ.11): ಈ ಬಾರಿ ನಡೆಯಲಿರುವ ಸ್ವತಂತ್ರ ದಿನಾಚರಣೆಯನ್ನು ಮದರಸಗಳಲ್ಲಿ ಹೇಗೆ ಆಚರಿಸುತ್ತಾರೆ ಎನ್ನುವುದನ್ನು ವಿಡಿಯೋಗ್ರಾಫ್ ಮಾಡುವಂತೆ ಯೋಗಿ ಆದಿತ್ಯನಾಥ್ ಸರ್ಕಾರ ಆದೇಶಿಸಿದೆ.
ಸ್ವತಂತ್ರ ದಿನಾಚರಣೆ ದಿನ ಬೆಳಿಗ್ಗೆ 8 ಗಂಟೆಗೆ ದ್ವಜಾರೋಹಣ ಮಾಡಲಾಗುತ್ತದೆ. 8.10 ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಹುತಾತ್ಮರಿಗೆ ನಮನ ಸಲ್ಲಿಸಲಾಗುತ್ತದೆ. ಈ ವಿಡಿಯೋವನ್ನು ಜಿಲ್ಲಾ ಅಲ್ಪಸಂಖ್ಯಾತ ಅಧಿಕಾರಿಗಳಿಗೆ ಕಳುಹಿಸಿಕೊಡಬೇಕು ಎಂದು ಆದೇಶಿಸಲಾಗಿದೆ.
ಕಳೆದ ವರ್ಷ ಸ್ವತಂತ್ರ ದಿನಾಚರಣೆಯಲ್ಲಿ ಮದರಸಗಳು ರೀತಿ ರಿವಾಜುಗಳನ್ನು ಪಾಲಿಸಿರಲಿಲ್ಲ. ಇದನ್ನು ಉತ್ತರ ಪ್ರದೇಶ ಮದಸರ ಮಂಡಳಿ ಸೇರಿದಂತೆ ಕೆಲವು ಸಂಘಟನೆಗಳು ವಿರೋಧಿಸಿದ್ದವು. ಈ ಹಿನ್ನಲೆಯಲ್ಲಿ ಈ ಭಾರಿ ಸ್ವತಂತ್ರ ದಿನಾಚರಣೆಯ ವಿಡಿಯೋ ಮಾಡಬೇಕೆಂದು ಆದೇಶ ನೀಡಲಾಗಿದೆ.
ಸ್ವಾತಂತ್ರ ಹೋರಾಟಕ್ಕೆ ಮದರಸಗಳು ಹಾಗೂ ಅದರ ಶಿಕ್ಷಕರು ಮೌಲ್ಯಯುತವಾದ ಕೊಡುಗೆ ನೀಡಿದ್ದಾರೆ. ಆದರೂ ನಮ್ಮನ್ನು ಸಂಶಯಾಸ್ಪದವಾಗಿ ನೋಡುತ್ತಿರುವುದು ದುರಾದೃಷ್ಟಕರವಾದ ವಿಚಾರ ಎಂದು ಮದರಸದ ಮುಖ್ಯಸ್ಥರು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.