ಸಿಎಂ-ಯೋಗಿ ಟ್ವಿಟರ್ ಗೇಮ್ ; ಯೋಗಿ ಉತ್ತಮ 'ಖಿಲಾಡಿ' ಎಂದು ಮೋದಿ ಶ್ಲಾಘನೆ

Published : Jan 12, 2018, 02:07 PM ISTUpdated : Apr 11, 2018, 12:40 PM IST
ಸಿಎಂ-ಯೋಗಿ ಟ್ವಿಟರ್ ಗೇಮ್ ; ಯೋಗಿ ಉತ್ತಮ 'ಖಿಲಾಡಿ' ಎಂದು ಮೋದಿ ಶ್ಲಾಘನೆ

ಸಾರಾಂಶ

ಪ್ರಧಾನಿ ನರೇಂದ್ರ ಮೋದಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್'ರನ್ನು ಶ್ಲಾಘಿಸಿದ್ದಾರೆ. ಯೋಗಿ ಆದಿತ್ಯಾಥ್ ಟ್ವಿಟರ್  ಗೇಮ್'ನಲ್ಲಿ "ಒಳ್ಳೆಯ ಆಟಗಾರರಿಗೆ" ಸವಾಲು ಹಾಕುವುದರಲ್ಲಿ ಯಶಸ್ವಿಯಾಗಿದ್ದಾರೆ ಎಂದು ಹೊಗಳುವ ಮೂಲಕ ಸಿಎಂ ಸಿದ್ದರಾಮಯ್ಯಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.

ನವದೆಹಲಿ (ಜ.12): ಪ್ರಧಾನಿ ನರೇಂದ್ರ ಮೋದಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್'ರನ್ನು ಶ್ಲಾಘಿಸಿದ್ದಾರೆ. ಯೋಗಿ ಆದಿತ್ಯಾಥ್ ಟ್ವಿಟರ್  ಗೇಮ್'ನಲ್ಲಿ "ಒಳ್ಳೆಯ ಆಟಗಾರರಿಗೆ" ಸವಾಲು ಹಾಕುವುದರಲ್ಲಿ ಯಶಸ್ವಿಯಾಗಿದ್ದಾರೆ ಎಂದು ಹೊಗಳುವ ಮೂಲಕ ಸಿಎಂ ಸಿದ್ದರಾಮಯ್ಯಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.

ಯೋಗಿ ಆದಿತ್ಯನಾಥ್ ಹಾಗೂ ಸಿಎಂ ಸಿದ್ದರಾಮಯ್ಯ ನಡುವೆ 'ಹಿಂದೂ' ವಿಚಾರವಾಗಿ ಟ್ವಿಟರ್ ವಾರ್ ನಡೆದ ಹಿನ್ನಲೆಯಲ್ಲಿ ಮೋದಿ ಈ ಮಾತನ್ನು ಹೇಳಿದ್ದಾರೆ.

ಏನ್ ಹೇಳಿದ್ರು ಸಿಎಂ?

ಯೋಗಿ ಹಸು ಎಮ್ಮೆ ಸಾಕಿದ್ದಾನಾ? ಹಸುವಿನ ಸಗಣಿ ಎತ್ತಿ, ಗೊಬ್ಬರ ಹೊತ್ತಿದ್ದಾನಾ? ಹಸು ಸಾಕದವರತ್ರ ಗೋವು ಬಗ್ಗೆ ಪಾಠ ಮಾಡುತ್ತಾನೆ. ನಾನು ಸಗಣಿ ಎತ್ತಿದ್ದೇನೆ, ಗೊಬ್ಬರ ಹೊತ್ತವನು. ಯೋಗಿ ಒಬ್ಬ ಡೋಂಗಿ ವ್ಯಕ್ತಿ. ನನಗೆ ಬೀಫ್ ಹಿಡಿಸಲ್ಲ, ಒಮ್ಮೆ ತಿಂದು ಆಮೇಲೆ ತಿಂದಿಲ್ಲ. ಯಾರಿಗೇನು ಬೇಕೋ ಅದನ್ನು ತಿಂತಾರೆ. ತಿನ್ನು- ತಿನ್ನಬೇಡ ಅನ್ನೋದಕ್ಕೆ ಇವರ್ಯಾರು? ಎಂದು ಸಿಎಂ ಸಿದ್ದರಾಮಯ್ಯ ವಾಕ್ ಪ್ರಹಾರ ನಡೆಸಿದ್ದರು.

 

 

ಸಿಎಂ ಸಿದ್ದರಾಮಯ್ಯ V/S ಯೋಗಿ ಆದಿತ್ಯನಾಥ್ ಟ್ವಿಟರ್ ವಾರ್

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಈಗಲೂ ಸೋಷಿಯಲ್ ಮೀಡಿಯಾ ವಾರ್.. ಗಿಲ್ಲಿ ಬದಲು ರಕ್ಷಿತಾ ಗೆಲ್ಬೇಕಿತ್ತು ಅಂತ..! ಯಾಕೆ ಗೊತ್ತಾ?
ಹೆಂಡತಿಯನ್ನೇ 'ಅಕ್ಕ' ಎಂದು ಪರಿಚಯಿಸಿ ಮದುವೆ ನಾಟಕ: ಟೆಕ್ಕಿ ಯುವತಿಗೆ ₹1.75 ಕೋಟಿ ವಂಚಿಸಿದ ಕಿರಾತಕ ಕುಟುಂಬ!