
ನವದೆಹಲಿ (ಸೆ.14): ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಚಿಕೂನ್ ಗುನ್ಯಾದಿಂದ ಸಾವಿಗೀಡಾಗುತ್ತಿರುವವರ ಸಂಖ್ಯೆ ಹೆಚ್ಚಳವಾಗುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಪ್ರತಿಕ್ರಿಯಿಸಿದ್ದಾರೆ. ಚಿಕೂನ್ ಗುನ್ಯಾದಿಂದ ಯಾರೂ ಸಾಯುವುದಿಲ್ಲ. ಇದು ನನ್ನ ಅಭಿಪ್ರಾಯವಲ್ಲ. ಗೂಗಲ್ ನಲ್ಲೇ ಇದೆ ಎಂದಿದ್ದಾರೆ.
ದೆಹಲಿ ಜನರು ಆತಂಕಗೊಳ್ಳುವ ಅಗತ್ಯವಿಲ್ಲ. ಮುಂಜಾಗ್ರತಾ ಕ್ರಮವನ್ನು ತೆಗೆದುಕೊಳ್ಳಿ. ಚಿಕೂನ್ ಲಕ್ಷಣಗಳು ಕಾಣಿಸಿಕೊಂಡರೆ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆದುಕೊಳ್ಳಿ ರಾಜ್ಯ ಸರ್ಕಾರವು ಚಿಕಿತ್ಸಾ ವೆಚ್ಚವನ್ನು ಭರಿಸಲಿದೆ. ಆದರೆ ವೈದ್ಯರು ದೃಢೀಕರಣ ಮಾಡಿದರೆ ಮಾತ್ರ ಸರ್ಕಾರ ವೆಚ್ಚ ಭರಿಸುತ್ತದೆ ಜನರು ಭಯಪಟ್ಟರಲ್ಲ ಎಂದಿದ್ದಾರೆ.
ಒಂದೇ ಆಸ್ಪತ್ರೆಯಲ್ಲಿ ನಾಲ್ವರು ಮೃತಪಟ್ಟಿರುವುದರ ಬಗ್ಗೆ ಸಂಶಯಿಸುತ್ತಾ ಜಗತ್ತಿನೆಲ್ಲೆಡೆಯೂ ಚಿಕೂನ್ ಗುನ್ಯಾದಿಂದ ಮೃತಪಟ್ಟಿರುವುದು ವರದಿಯಾಗಿಲ್ಲ. ದೆಹಲಿಯಲ್ಲಿ ಮಾತ್ರ ಆಗುತ್ತಾ? ಎಂದು ಸತ್ಯೇಂದರ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.