ನೀವು ನೋಟ್ ಬಂದ್ ಮಾಡಿದರೆ ಜನ ನಿಮ್ಮನ್ನು ವೋಟಿನಲ್ಲಿ ಬಂದ್ ಮಾಡುತ್ತಾರೆ : ಮೋದಿಗೆ ದೀದಿ ಎಚ್ಚರಿಕೆ

Published : Nov 29, 2016, 11:15 AM ISTUpdated : Apr 11, 2018, 12:56 PM IST
ನೀವು ನೋಟ್ ಬಂದ್ ಮಾಡಿದರೆ ಜನ ನಿಮ್ಮನ್ನು ವೋಟಿನಲ್ಲಿ ಬಂದ್ ಮಾಡುತ್ತಾರೆ : ಮೋದಿಗೆ ದೀದಿ ಎಚ್ಚರಿಕೆ

ಸಾರಾಂಶ

ಹೆಚ್ಚು ಮುಖಬೆಲೆಯ ನೋಟುಗಳನ್ನು ನಿಷೇಧಿಸಿರುವ ಮೋದಿಯವರ ಕ್ರಮವನ್ನು ಖಂಡಿಸುತ್ತಾ  ಇದೊಂದು ಕಪ್ಪು ತುರ್ತು ಪರಿಸ್ಥಿತಿ ಎಂದು ಪ.ಬಂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಲಕ್ನೋ (ನ.29): ಹೆಚ್ಚು ಮುಖಬೆಲೆಯ ನೋಟುಗಳನ್ನು ನಿಷೇಧಿಸಿರುವ ಮೋದಿಯವರ ಕ್ರಮವನ್ನು ಖಂಡಿಸುತ್ತಾ  ಇದೊಂದು ಕಪ್ಪು ತುರ್ತು ಪರಿಸ್ಥಿತಿ ಎಂದು ಪ.ಬಂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರಿಗೆ ಶೀಘ್ರದಲ್ಲಿಯೇ ಹೊರ ಹೋಗುವ ದಾರಿಯನ್ನು ದೇಶದ ಜನತೆ ತೋರಿಸಲಿದೆ ಎಂದು ದೀದಿ ಗುಡುಗಿದ್ದಾರೆ.

“ದೇಶದಲ್ಲಿ ಆರ್ಥಿಕತೆ ತಗ್ಗಿದೆ. ಜಿಡಿಪಿ ನಷ್ಟದಲ್ಲಿದೆ. ಹಣದ ಅಮಾನ್ಯವು ಕಪ್ಪುಹಣದ ವಿರುದ್ಧ ಹೋರಾಟವಲ್ಲ. ಬದಲಿಗೆ ಇದು ಕಪ್ಪು ತುರ್ತುಪರಿಸ್ಥಿತಿ. ಇದರಿಂದ ಜನರು ತೊಂದರೆ ಅನುಭವಿಸುತ್ತಿದ್ದಾರೆ. ಕೆಲವು ಹಳ್ಳಿಗಳಲ್ಲಿ ಬ್ಯಾಂಕುಗಳ ಸೌಲಭ್ಯವಿಲ್ಲ. ಜನರು ಹೇಗೆ ಬದುಕಬೇಕು? ನಿಮಗೆ ಚೆಕ್ ಗಳಲ್ಲಿ ವೇತನ ಪಡೆದರೆ ದಿನ ನಿತ್ಯದ ಖರ್ಚುಗಳಿಗೆ ಏನು ಮಾಡಬೇಕು ಎಂದು ಮಮತಾ ಬ್ಯಾನರ್ಜಿ ಪ್ರಶ್ನಿಸಿದ್ದಾರೆ.

ನೀವು ‘ನೋಟ್ ಬಂಧಿ’ಯನ್ನು ಮಾಡಿದ್ದೀರಿ. ಜನರು ನಿಮಗೆ ವೋಟ್ ಬಂಧಿ ಮಾಡಲಿದ್ದಾರೆ ಎಂದು ಮಮತಾ ಬ್ಯಾನರ್ಜಿ ಮೋದಿಯವರಿಗೆ ಎಚ್ಚರಿಕೆ ನೀಡಿದ್ದಾರೆ.    

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಾಮನಗರ: ಅತ್ತೆ ಸೊಸೆ ಜಗಳ: 19 ವರ್ಷದ ಗರ್ಭಿಣಿ ಸೊಸೆ ನಯನಾ ಸಾವಿಗೆ ಶರಣು
Karnataka CHC downgrade: ರಾಜ್ಯದ 230 ಆರೋಗ್ಯ ಸಮುದಾಯ ಕೇಂದ್ರಗಳಿಗೆ ಕುತ್ತು?