
ನವದೆಹಲಿ (ಡಿ.01): ದೇಶದಲ್ಲಿ ನಗದು ರಹಿತ ಆರ್ಥಿಕತೆ ನಿರ್ಮಾಣ ಮಾಡಲು, ಕಾರ್ಡ್ ಗಳ ಬಳಕೆ ಹೆಚ್ಚಾಗಿಸಲು ಪ್ರಧಾನಿ ಮೋದಿಯವರು ಕರೆಕೊಟ್ಟಿದ್ದು ಅಗತ್ಯ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.
ಡಿಜಿಟಲ್ ವ್ಯವಹಾರಗಳಿಗೆ ಇನ್ನು ಮುಂದೆ ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡಲಾಗುತ್ತದೆ. ಅಂಡ್ರಾಯ್ಡ್ ಮೊಬೈಲ್ ಬಳಕೆದಾರರು ಆನ್ ಲೈನ್ ವ್ಯವಹಾರ ನಡೆಸುವಾಗ ಆಧಾರ್ ಸಂಖ್ಯೆಯನ್ನು ನೀಡಬೇಕಾಗುತ್ತದೆ. ದೃಢೀಕರಣಕ್ಕಾಗಿ ಬೆರಳಚ್ಚು ನೀಡಬೇಕಾಗುತ್ತದೆ ಎಂದು ಯುಐಡಿಎಐ ನಿರ್ದೇಶಕ ಅಜಯ್ ಪಾಂಡೆ ಹೇಳಿದ್ದಾರೆ.
ಇದು ಸುದೀರ್ಘವಾದ ಪ್ರಕ್ರಿಯೆಯಾಗಿದ್ದು ಮೊಬೈಲ್ ತಯಾರಕರು, ವ್ಯಾಪಾರಿಗಳು, ಬ್ಯಾಂಕ್ ಜೊತೆ ಮಾತುಕತೆ ನಡೆಸಬೇಕಿದೆ. ಇದನ್ನು ಕಾರ್ಯರೂಪಕ್ಕೆ ತರಲು ಸರ್ಕಾರ ಕೆಲಸ ಪ್ರಾರಂಭಿಸಿದೆ ಎಂದು ಪಾಂಡೆ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.