ಚಿತ್ರದುರ್ಗದಲ್ಲೇ ಮದಕರಿ ನಾಯಕರಿಗೆ ಅವಮಾನ..!

Published : Oct 30, 2018, 04:35 PM ISTUpdated : Oct 30, 2018, 04:53 PM IST
ಚಿತ್ರದುರ್ಗದಲ್ಲೇ ಮದಕರಿ ನಾಯಕರಿಗೆ ಅವಮಾನ..!

ಸಾರಾಂಶ

ಯುವಕನೋರ್ವ ಮದಕರಿ ನಾಯಕ ಪ್ರತಿಮೆ ಮೇಲೇರಿ ಕುಳಿತು ಅವಮಾನಗೊಳಿಸಿದ್ದಾನೆ. ಎಲ್ಲಿ? ಏನಿದ ಘಟನೆ? ಇಲ್ಲಿದೆ ವಿವರ

ಚಿತ್ರದುರ್ಗ, (ಅ.30) : ಯುವಕನೋರ್ವ ಮದಕರಿ ನಾಯಕ ಪ್ರತಿಮೆ ಮೇಲೇರಿ ಕುಳಿತು ಅವಮಾನಗೊಳಿಸಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

ಚಿತ್ರದುರ್ಗ ನಗರದಲ್ಲಿರುವ ಮದಕರಿ ನಾಯಕ ಪ್ರತಿಮೆ ಪ್ರತಿಮೆಗೆ ಹೂಮಾಲೆ ಹಾಕಲು ಹೋದಾಗ ಮದಕರಿ ಕುದುರೆ ಮೇಲೆ ಕುಳಿತು ಫೋಟೋಗೆ ಫೋಸ್ ಕೊಟ್ಟಿದ್ದಾನೆ.

ಮದಕರಿ ಕುದುರೆ ಮೇಲೆ ಕುಳಿತು ಫೋಟೋ ಕ್ಲಿಕ್ಕಿಸಿಕೊಂಡ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿದ್ದು, ಇದಕ್ಕೆ ಆಕ್ರೋಶಗಳು ಸಹ ವ್ಯಕ್ತವಾಗಿವೆ.

ಫೋಟೋಗೆ ಫೋಸ್ ಕೊಟ್ಟ ಯುವಕನ ವಿರುದ್ಧ ತಕ್ಷಣವೇ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಅಷ್ಟೇ ಅಲ್ಲದೇ ಪ್ರತಿಮೆ ಬಳಿಗೆ ತೆರಳಲು ಮೆಟ್ಟಿಲು ಅಳವಡಿಸಿದ್ದಕ್ಕೆ ಆಕ್ರೋಶಗೊಂಡಿದ್ದಾರೆ.

 ನಾಯಕರ ಪ್ರತಿಮೆ, ಮೂರ್ತಿ, ಭಾವಚಿತ್ರಗಳಿಗೆ ಸೂಕ್ತ ರಕ್ಷಣೆ ನೀಡುವಂತೆ ಕೆಲವರು ಸಾಮಾಜಿಕ ಜಾಲತಾಣ ಮೂಲಕ ಮನವಿ ಮಾಡಿದ್ದು, ಮದಕರಿ ನಾಯಕ ಪ್ರತಿಮೆ ಬಳಿ ಅಳವಡಿಸಿರುವ ಮೆಟ್ಟಿಲು ತೆರವಿಗೆ ಆಗ್ರಹಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪಿಯುಸಿ ಸರ್ಟಿಫಿಕೇಟ್ ಇದ್ದರೆ ಮಾತ್ರ ವಾಹನಕ್ಕೆ ಪೆಟ್ರೋಲ್ -ಡೀಸೆಲ್, ಡಿ.18ರಿಂದ ಹೊಸ ನಿಯಮ
ಕಿಡ್ನಾಪ್ ಮಾಡಿದವರ ಸ್ಮಾರ್ಟ್‌ವಾಚ್ ಬಳಸಿ ಬಚಾವ್ ಆದ ಹೊಟೆಲ್ ಮ್ಯಾನೇಜರ್, ಕೈಹಿಡಿದ SOS