ಕಮಲಾನಗರದಲ್ಲಿ ಯುವಕನ ಕಗ್ಗೊಲೆ

Published : Jul 24, 2017, 07:15 AM ISTUpdated : Apr 11, 2018, 01:06 PM IST
ಕಮಲಾನಗರದಲ್ಲಿ ಯುವಕನ ಕಗ್ಗೊಲೆ

ಸಾರಾಂಶ

ಮದನ್,​ ನಿನ್ನೆ ಸಂಜೆ ಕೆಲಸ ಮುಗಿಸಿ ಕಮಲಾನಗರದಲ್ಲಿರೋ ತಮ್ಮ ಮನೆಗೆ ಬಂದಿದ್ದಾನೆ. ಈ ವೇಳೆ ಎರಡು ಬೈಕ್'​​ನಲ್ಲಿ ಬಂದ ಮೂವರು ದುಷ್ಕರ್ಮಿಗಳ ತಂಡ ಮದನ್'​​ನನ್ನ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು, ಪರಾರಿಯಾಗಿದ್ದಾರೆ.

ಬೆಂಗಳೂರು(ಜುಲೈ 24): ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳ ಗುಂಪೊಂದು ಯುವಕನೊಬ್ಬನಿಗೆ ಚಾಕು ಇರಿದು ಕೋಲೆಗೈದಿರುವ ಘಟನೆ ಕಮಲಾನಗರ ವ್ಯಾಪ್ತಿಯಲ್ಲಿ ನಡೆದಿದೆ. ಕಮಲಾನಗರ ಮೂಲದ ಮದನ್ ಎಂಬಾತ​​ ಮೃತ ದುರ್ದೈವಿ.

ಬಜಾಜ್​​ ಅಲೆಯನ್ಸ್​'​ನಲ್ಲಿ ಕೆಲಸ ಮಾಡುತ್ತಿದ್ದ ಮದನ್,​ ನಿನ್ನೆ ಸಂಜೆ ಕೆಲಸ ಮುಗಿಸಿ ಕಮಲಾನಗರದಲ್ಲಿರೋ ತಮ್ಮ ಮನೆಗೆ ಬಂದಿದ್ದಾನೆ. ಈ ವೇಳೆ ಎರಡು ಬೈಕ್'​​ನಲ್ಲಿ ಬಂದ ಮೂವರು ದುಷ್ಕರ್ಮಿಗಳ ತಂಡ ಮದನ್'​​ನನ್ನ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು, ಪರಾರಿಯಾಗಿದ್ದಾರೆ. ಈ ನಡುವೆ ಅಡ್ಡ ಬಂದ ಮದನ್​ ತಾಯಿ ಮೇಲೆ ಕೂಡ ದುಷ್ಕರ್ಮಿಗಳು  ಹಲ್ಲೆ ಮಾಡಿದ್ದಾರೆ. ಈ ಸಂಬಂಧ ಬಸವೇಶ್ವರ ನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗಾಗಿ ಪೊಲಿಸರು ಬಲೆ ಬೀಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮೈಸೂರು ಏಕತಾ ಮಹಲ್‌ ವಿವಾದ, ಕೋರ್ಟ್ ಮೆಟ್ಟಲೇರಿದ ರಾಜಮಾತೆ ಪ್ರಮೋದಾದೇವಿ!
ವಿಮಾನದ ಬಾಲಕ್ಕೆ ಪ್ಯಾರಾಚೂಟ್ ಸಿಲುಕಿ15,000 ಅಡಿ ಎತ್ತರದಲ್ಲಿ ನೇತಾಡಿದ ಸ್ಕೈಡೈವರ್ ಬದುಕುಳಿದಿದ್ದು ಹೇಗೆ? ವೀಡಿಯೋ