
ಬೆಂಗಳೂರು : ಶುಗರ್ ಕಾಯಿಲೆ ಇದೆ ಎಂದು ಗೊತ್ತಾಗಿ ಯುವಕನೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್’ನಲ್ಲಿ ನಡೆದಿದೆ.
ಮೂಲತಃ ಹಾಸನದವನಾದ ಮಧು (25) ಎಂಬ ಯುವಕ ಇಲ್ಲಿ ಅಣ್ಣ ಅತ್ತಿಗೆಯೊಂದಿಗೆ ವಾಸವಾಗಿದ್ದ.
ಕೆಲ ದಿನಗಳಿಂದ ಈತನಿಗೆ ಅನಾರೋಗ್ಯ ಕಾಡುತ್ತಿತ್ತು. ಬಳಿಕ ವೈದ್ಯರ ಬಳಿ ಹೋಗಿ ಪರೀಕ್ಷೆ ಮಾಡಿಸಿದಾಗ ಶುಗರ್ ಇರುವ ವಿಚಾರ ತಿಳಿದು ಬಂದಿದೆ.
ನಿನ್ನೆ ಈ ವಿಚಾರವನ್ನು ತನ್ನ ಅತ್ತಿಗೆಯೊಂದಿಗೆ ಹೇಳಿಕೊಂಡಿದ್ದ ಮಧು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಸಂಬಂಧ ಮಹಾಲಕ್ಷ್ಮೀ ಲೇ ಔಟ್ ಠಾಣೆಯಲ್ಲಿ ಪ್ರಕರಣದ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.