ವೈಎಸ್‌ಆರ್‌ ಕಾಂಗ್ರೆಸ್‌ಗೆ ಬಿಜೆಪಿಯಿಂದ ಸಿಕ್ತು ಆಫರ್!

Published : Jun 13, 2019, 09:05 AM IST
ವೈಎಸ್‌ಆರ್‌ ಕಾಂಗ್ರೆಸ್‌ಗೆ ಬಿಜೆಪಿಯಿಂದ ಸಿಕ್ತು ಆಫರ್!

ಸಾರಾಂಶ

ವೈಎಸ್‌ಆರ್‌ ಕಾಂಗ್ರೆಸ್‌ಗೆ ಹೊಸ ಹುದ್ದೆ: ಬಿಜೆಪಿಯಿಂದ ಆಫರ್‌!| ನಿರ್ಧಾರ ಕೈಗೊಳ್ಳಲು ತಮಗೆ ಸ್ವಲ್ಪ ಕಾಲಾವಕಾಶ ಬೇಕೆಂದ ಜಗನ್‌| ಅಷ್ಟಕ್ಕೂ ಬಿಜೆಪಿ ಆಫರ್ ಮಾಡಿದ ಹುದ್ದೆ ಯಾವುದು?

ವಿಜಯವಾಡ[ಜೂ.13]: ಲೋಕಸಭೆಯಲ್ಲಿ 4ನೇ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಜಗನ್‌ ಮೋಹನ್‌ ರೆಡ್ಡಿ ನೇತೃತ್ವದ ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷಕ್ಕೆ ಲೋಕಸಭೆಯ ಉಪಸ್ಪೀಕರ್‌ ಹುದ್ದೆಯ ಆಫರ್‌ ಅನ್ನು ಬಿಜೆಪಿ ನೀಡಿದೆ.

ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷಕ್ಕೆ ಎನ್‌ಡಿಎ ಮೈತ್ರಿಕೂಟದ ಭಾಗವಾಗುವಂತೆ ಆಫರ್‌ ನೀಡಲಾಗಿದ್ದು, ಅದಕ್ಕೆ ಜಗನ್‌ ಒಪ್ಪಿದರೆ, ಲೋಕಸಭೆಯ ಉಪ ಸ್ಪೀಕರ್‌ ಸ್ಥಾನವನ್ನು ವೈಎಸ್‌ಆರ್‌ಸಿಪಿಗೆ ಬಿಟ್ಟುಕೊಡುವುದಾಗಿ ಬಿಜೆಪಿ ಹೇಳಿದೆ. ಆದರೆ, ಈ ಬಗ್ಗೆ ನಿರ್ಧಾರ ಕೈಗೊಳ್ಳಲು ತಮಗೆ ಸ್ವಲ್ಪ ಕಾಲಾವಕಾಶ ಬೇಕೆಂದು ಜಗನ್‌ ಕೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮಂಗಳವಾರ ವಿಜಯವಾಡದಲ್ಲಿ ಆಂಧ್ರಪ್ರದೇಶ ಸಿಎಂ ಹಾಗೂ ವೈಎಸ್‌ಆರ್‌ಸಿಪಿ ಮುಖ್ಯಸ್ಥ ಜಗನ್‌ ಅವರನ್ನು ಭೇಟಿಯಾದ ಬಿಜೆಪಿ ರಾಷ್ಟ್ರೀಯ ವಕ್ತಾರ ಹಾಗೂ ಸಂಸದ ಜಿ.ವಿ.ಎಲ್‌ ನರಸಿಂಹ ರಾವ್‌ ಅವರು, ಈ ಆಫರ್‌ ನೀಡಿದ್ದಾರೆ ಎಂದು ತಿಳಿದುಬಂದಿದೆ. ಆದರೆ, ಈ ಬಗ್ಗೆ ವೈಎಸ್‌ಆರ್‌ಸಿಪಿ ಇದುವರೆಗೂ ಮೌನ ಮುರಿದಿಲ್ಲ. ಜಗನ್‌ ನೇತೃತ್ವದ ವೈಎಸ್‌ಆರ್‌ಸಿಪಿ 22 ಲೋಕಸಭಾ ಕ್ಷೇತ್ರಗಳನ್ನು ಜಯಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೇವಲ 2 ನಿಮಿಷ ಮಗಳ ನೋಡಲು 11ಗಂಟೆಗೆ ಸ್ಟೇಶನ್‌ಗೆ ಬಂದ ತಂದೆ, ಭಾವುಕ ಕ್ಷಣದ ವಿಡಿಯೋ
ಬೀದಿಯಲ್ಲಿ ಬಿದ್ದಿದ್ದ ಕಲ್ಲಿಂದ ಹಣ ಮಾಡೋದು ಹೇಗೆ ಎಂದು ತೋರಿಸಿಕೊಟ್ಟ ಹುಡುಗ: ವೀಡಿಯೋ ಭಾರಿ ವೈರಲ್