ಜಗನ್ ಎನ್'ಡಿಎ ಸೇರಲು ಜನಾರ್ಧನ ರೆಡ್ಡಿ ಮಧ್ಯಸ್ಥಿಕೆ..?

Published : Aug 21, 2017, 12:25 PM ISTUpdated : Apr 11, 2018, 01:13 PM IST
ಜಗನ್ ಎನ್'ಡಿಎ ಸೇರಲು ಜನಾರ್ಧನ ರೆಡ್ಡಿ ಮಧ್ಯಸ್ಥಿಕೆ..?

ಸಾರಾಂಶ

ಜಗನ್ ಅವರನ್ನು ಎನ್‌'ಡಿಎಗೆ ಸೇರಿಸಿಕೊಳ್ಳಲು ಬಿಜೆಪಿಗೆ ಆಸಕ್ತಿ ಇದೆಯಾದರೂ, ಮಿತ್ರಪಕ್ಷವಾಗಿರುವ ಆಂಧ್ರ ಪ್ರದೇಶದ ಆಡಳಿತಾರೂಢ ಟಿಡಿಪಿ ಪ್ರಮುಖ ಅಡ್ಡಿಯಾಗಿದೆ.

ಅಮರಾವತಿ(ಆ.21): ಬಿಜೆಪಿ ಸಾರಥ್ಯದ ಎನ್‌'ಡಿಎ ಪಾಳೆಯಕ್ಕೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಮರಳಿದ ಬೆನ್ನಲ್ಲೇ, ಆಂಧ್ರಪ್ರದೇಶದ ವೈಎಸ್ಸಾರ್ ಕಾಂಗ್ರೆಸ್ ಸಂಸ್ಥಾಪಕ ಜಗನ್ ಮೋಹನ ರೆಡ್ಡಿ ಕೂಡ ಅದೇ ಹಾದಿಯಲ್ಲಿದ್ದಾರೆ. ಬಿಜೆಪಿ ಜತೆ ಕೈಜೋಡಿಸಲು ಜಗನ್ ಉತ್ಸುಕರಾಗಿದ್ದು, ಕರ್ನಾಟಕದ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಮಧ್ಯಸ್ಥಿಕೆ ವಹಿಸಿದ್ದಾರೆ ಎಂದು ಸುದ್ದಿವಾಹಿನಿಯೊಂದು ವರದಿ ಮಾಡಿದೆ.

ಕಾಂಗ್ರೆಸ್ ಜತೆ ಮೈತ್ರಿ ಮಾಡಿಕೊಳ್ಳಲು ಜಗನ್ ಬಯಸಿದ್ದರು. ಆದರೆ ಈ ಕುರಿತು ಆ ಪಕ್ಷದ ಉಪಾಧ್ಯಕ್ಷ ರಾಹುಲ್ ಜತೆ ನಡೆದ ಮಾತುಕತೆ ವಿಫಲವಾದ ಬೆನ್ನಲ್ಲೇ, ಬಿಜೆಪಿ ಜತೆ ಹೊಂದಾಣಿಕೆ ಮಾಡಿಕೊಳ್ಳಲು ಬಯಸಿದ್ದಾರೆ. ಜನಾರ್ದನ ರೆಡ್ಡಿ ಅವರು ಬಿಜೆಪಿ ಕೇಂದ್ರ ನಾಯಕರು ಹಾಗೂ ಜಗನ್ ನಡುವೆ ಮಧ್ಯಸ್ಥಿಕೆ ವಹಿಸಿದ್ದಾರೆ. ಜಗನ್‌'ರನ್ನು ದೆಹಲಿಗೆ ಕರೆದೊಯ್ದು ವಿವಿಧ ನಾಯಕರನ್ನು ಭೇಟಿ ಮಾಡಿಸಿದ್ದಾರೆ. ಈ ಸಂದರ್ಭ ಎನ್‌'ಡಿಎ ಸೇರಲು ಜಗನ್ ಒಲವು ತೋರಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ‘ರಿಪಬ್ಲಿಕ್’ ಚಾನೆಲ್ ವರದಿ ಪ್ರಕಟಿಸಿದೆ.

ಜಗನ್ ಅವರನ್ನು ಎನ್‌'ಡಿಎಗೆ ಸೇರಿಸಿಕೊಳ್ಳಲು ಬಿಜೆಪಿಗೆ ಆಸಕ್ತಿ ಇದೆಯಾದರೂ, ಮಿತ್ರಪಕ್ಷವಾಗಿರುವ ಆಂಧ್ರ ಪ್ರದೇಶದ ಆಡಳಿತಾರೂಢ ಟಿಡಿಪಿ ಪ್ರಮುಖ ಅಡ್ಡಿಯಾಗಿದೆ. ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡುಗೆ ಜಗನ್ ವಿರೋಧಿಯಾಗಿದ್ದಾರೆ. ಜಗನ್ ಇರುವೆಡೆ ತಾವಿರುವುದಿಲ್ಲ ಎಂದು ನಾಯ್ಡು ತಿಳಿಸಿದ್ದಾರೆ ಎನ್ನಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರೈಲ್ವೆ ಟಿಕೆಟ್‌ ದರ ಅಲ್ಪ ಹೆಚ್ಚಳ
ಫಾಸ್ಟ್ಯಾಗ್‌ ದಂಡದಲ್ಲಿ ಕರ್ನಾಟಕ ನಂ.1