ಜಾಕಿರ್ ನಾಯ್ಕ್‌ನನ್ನು ಭಾರತಕ್ಕೆ ಕಳಸಲ್ವಂತೆ ಮಲೇಷ್ಯಾ ಪ್ರಧಾನಿ!

Published : Jul 06, 2018, 05:34 PM ISTUpdated : Jul 06, 2018, 06:16 PM IST
ಜಾಕಿರ್ ನಾಯ್ಕ್‌ನನ್ನು  ಭಾರತಕ್ಕೆ ಕಳಸಲ್ವಂತೆ ಮಲೇಷ್ಯಾ ಪ್ರಧಾನಿ!

ಸಾರಾಂಶ

ಜಾಕಿರ್ ನಾಯ್ಕ್ ಗಡಿಪಾರಿಗೆ ಮಲೇಷ್ಯಾ ಪ್ರಧಾನಿ ನಕಾರ ಜಾಕಿರ್‌ನನ್ನು ಭಾರತಕ್ಕೆ ಕಳುಹಿಸಲ್ಲ ಎಂದ ಮಹತಿರ್ ಭಾರತದ ಮನವಿಗೆ ಸ್ಪಂದಿಸದ ಮಲೇಷ್ಯಾ ಪ್ರಧಾನಿ

ನವದೆಹಲಿ(ಜು.6): ವಿವಾದಿತ ಇಸ್ಲಾಂ ಧರ್ಮ ಪ್ರಚಾರಕ ಜಾಕಿರ್ ನಾಯ್ಕ್‌ನನ್ನು ಭಾರತಕ್ಕೆ ಕಳಿಸುವುದಿಲ್ಲ ಎಂದು ಮಲೇಷ್ಯಾ ಪ್ರಧಾನಿ ಮಹತಿರ್ ಮೊಹಮ್ಮದ್ ಹೇಳಿದ್ದಾರೆ. 

ಜಾಕಿರ್ ನಾಯ್ಕ್‌ನನ್ನು ಮಲೇಷ್ಯಾದಿಂದ ಭಾರತಕ್ಕೆ ಗಡಿ ಪಾರು ಮಾಡಲಾಗಿದೆ ಎಂಬ ವರದಿಗಳು ಪ್ರಕಟವಾದ ಬೆನ್ನಲ್ಲೇ ಸ್ಪಷ್ಟನೆ ನೀಡಿರುವ ಮಲೇಷ್ಯಾ ಪ್ರಧಾನಿ ಮಹತಿರ್ ಮೊಹಮ್ಮದ್, ಯಾವುದೇ ಕಾರಣಕ್ಕೂ ಜಾಕಿರ್ ನಾಯ್ಕ್‌ನನ್ನು ಭಾರತಕ್ಕೆ ಕಳಿಸುವುದಿಲ್ಲ ಎಂದಿದ್ದಾರೆ.

ಇದಕ್ಕೂ ಮೊದಲು ಜಾಕಿರ್ ನಾಯ್ಕ್ ಭಾರತಕ್ಕೆ ಬರುವುದರ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ತಮ್ಮ ವಿರುದ್ಧ ದಾಖಲಾಗಿರುವ ಸುಳ್ಳು ಮೊಕದ್ದಮೆಗಳು ರದ್ದುಗೊಂಡು ತಾನು ಸೇಫ್ ಎನಿಸುವವರೆಗೂ ಭಾರತಕ್ಕೆ ಬರುವುದಿಲ್ಲ ಎಂದು ಹೇಳಿದ್ದರು. ಜಾಕಿರ್ ನಾಯ್ಕ್ ವಿರುದ್ಧ ಅಕ್ರಮ ಹಣ ವರ್ಗಾವಣೆ, ದ್ವೇಷ ಭಾಷಣ ಸೇರಿದಂತೆ ಹಲವು ಪ್ರಕರಣಗಳು ದಾಖಲಾಗಿದ್ದು ಬಂಧನದಿಂದ ತಪ್ಪಿಸಿಕೊಳ್ಳುವುದಕ್ಕಾಗಿ ಮಲೇಷ್ಯಾಕ್ಕೆ ತೆರಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮುಸ್ಲಿಂ ಲೀಗ್‌, ಜಿನ್ನಾಗೆ ಮಣಿದ ನೆಹರು, ವಂದೇ ಮಾತರಂ ಅನ್ನು ಹರಿದು ಹಾಕಿದ್ದು ಕಾಂಗ್ರೆಸ್‌: ಮೋದಿ ವಾಗ್ದಾಳಿ
ಸಿಎಂ ಗೊಂದಲಕ್ಕೆ ಮತ್ತೆ ಬೆಂಕಿ: ಸಿದ್ದರಾಮಯ್ಯ 5 ವರ್ಷ ಸಿಎಂ, ಬದಲಾದರೆ ಡಿಕೆಶಿ ಒಬ್ರೇ ರೇಸ್‌ನಲ್ಲಿಲ್ಲ..; - ಕೆಎನ್ ರಾಜಣ್ಣ