ಖರ್ಜೂರಕ್ಕೆ ಒಲಿದು ಬಂತು ಕಾರು : ಮತ್ತೆ ಕುಚುಕುಗಳಾದ ಗುರು ಶಿಷ್ಯರು

Published : Jul 02, 2018, 07:11 PM ISTUpdated : Jul 02, 2018, 08:00 PM IST
ಖರ್ಜೂರಕ್ಕೆ ಒಲಿದು ಬಂತು ಕಾರು : ಮತ್ತೆ ಕುಚುಕುಗಳಾದ ಗುರು ಶಿಷ್ಯರು

ಸಾರಾಂಶ

ಇನ್ನೋವಾ ಬದಲಿಗೆ ಫಾರ್ಚೂನರ್ ಸರ್ಕಾರಿ ಪಡೆದ ಸಚಿವ ಜಮೀರ್ ಅಹ್ಮದ್ ಖಾನ್  ಗುರು-ಶಿಷ್ಯರು ಮತ್ತೆ ಕುಚುಕುಗಳಾಗಿದ್ದಾರೆ ಎಂದು ರಾಜಕೀಯ ವಲಯದಲ್ಲಿ ಚರ್ಚೆ 

ಬೆಂಗಳೂರು[ಜು.02]: ತಾನು ಬಯಸಿದಂತೆ ಬಿಗ್ ಕಾರು ಪಡೆದುಕೊಳ್ಳಲು ಸಚಿವ ಜಮೀರ್ ಅಹ್ಮದ್ ಖಾನ್ ಯಶಸ್ವಿಯಾಗಿದ್ದಾರೆ.

ಮಾಜಿ ಪರಮಾಪ್ತನ ಬೇಡಿಕೆಯನ್ನು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಈಡೇರಿಸಿದ್ದು ಫಾರ್ಚೂನರ್ ಕಾರು ಜಮೀರ್ ಅವರಿಗೆ ದೊರಕಿದೆ. ಇತ್ತೀಚಿಗಷ್ಟೆ ಜಮೀರ್ ಉಮ್ರಾ ಯಾತ್ರೆಯಿಂದ ಖರ್ಜೂರ ತಂದು ಕೊಟ್ಟಿದ್ದರು. ಖರ್ಜೂರಕ್ಕೆ ಕಾರು ಒಲಿದು ಬಂದಿದೆ. ಮತ್ತೆ ಕುಮಾರಸ್ವಾಮಿ ಹಾಗೂ ಜಮೀರ್ ಅಹ್ಮದ್ ಗುರು-ಶಿಷ್ಯರು ಕುಚುಕುಗಳಾಗಿದ್ದಾರೆ ಎಂದು ಕಾಂಗ್ರೆಸ್, ಜೆಡಿಎಸ್  ನಾಯಕರಲ್ಲಿ ಚರ್ಚೆ ನಡೆಯುತ್ತಿದೆ. 

ವೈಯಕ್ತಿಕವಾಗಿಯೂ ಟೀಕಿಸಿದ್ದ ಜಮೀರ್ ಅಹ್ಮದ್ ಅವರಿಗೆ ಸಿದ್ದರಾಮಯ್ಯ ಬಳಸುತ್ತಿದ್ದ ಫಾರ್ಚೂನರ್ ಸರ್ಕಾರಿ ಕಾರು ದೊರಕಿದೆ.  ನನಗೆ ಇನ್ನೋವಾ ಬೇಡ. ಫಾರ್ಚೂನರ್ ಕಾರೇ ಬೇಕೆನ್ನುತ್ತಿದ್ದರು ಸಚಿವರು. ಜಮೀರ್ ಅವರ ಬೇಡಿಕೆಯನ್ನು ಸರ್ಕಾರ ಕೊನೆಗೂ ನೆರವೇರಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮುದ್ದಿನ ಶ್ವಾನಗಳಿಗಾಗಿ ಅನಿಮೇಟೆಡ್ ಸಿನಿಮಾ ಶೋ ಆಯೋಜಿಸಿದ ಥಿಯೇಟರ್: ರೆಡ್ ಕಾರ್ಪೆಟ್ ಹಾಸಿ ಸ್ವಾಗತ
ಇಂಡಿಗೋ ವಿಮಾನ ರದ್ದಾಗಿ ಪರದಾಡುತ್ತಿರುವ ಪ್ರಯಾಣಿಕರ ನೆರವಿಗೆ ಧಾವಿಸಿದ ಭಾರತೀಯ ರೈಲ್ವೆ