ಕದಿರೇಶ್ ಹತ್ಯೆಗೆ ಜಮೀರ್ ಖಂಡನೆ

Published : Feb 07, 2018, 10:26 PM ISTUpdated : Apr 11, 2018, 12:39 PM IST
ಕದಿರೇಶ್ ಹತ್ಯೆಗೆ ಜಮೀರ್ ಖಂಡನೆ

ಸಾರಾಂಶ

ಬಿಜೆಪಿ ಕಾರ್ಪೊರೇಟರ್ ರೇಖಾ ಅವರ ಪತಿ ಕದಿರೇಶ್ ಕೊಲೆಯನ್ನು ಶಾಸಕ ಜಮೀರ್ ಅಹಮದ್ ಖಾನ್ ಖಂಡಿಸಿದ್ದಾರೆ.

ಬೆಂಗಳೂರು: ಬಿಜೆಪಿ ಕಾರ್ಪೊರೇಟರ್ ರೇಖಾ ಅವರ ಪತಿ ಕದಿರೇಶ್ ಕೊಲೆಯನ್ನು ಶಾಸಕ ಜಮೀರ್ ಅಹಮದ್ ಖಾನ್ ಖಂಡಿಸಿದ್ದಾರೆ.

ಕದಿರೇಶ್ ನನಗೆ ಒಳ್ಳೆ ಸ್ನೇಹಿತ, ಆತನ ಸಾವು ನೋವು ತಂದಿದೆ, ಎಂದು ಹೇಳಿರುವ ಜಮೀರ್ ಅಹಮದ್. ‘ಬಿಜೆಪಿಯವರು ಹತ್ಯೆಯಲ್ದಿ ರಾಜಕಾರಣ ಮಾಡುತ್ತಿದ್ದಾರೆ, ಎನ್.ಆರ್.ರಮೇಶ್ ಅನಾವಶ್ಯಕವಾಗಿ ನನ್ನ ಹೆಸರನ್ನ ತಂದಿದ್ದಾರೆ, ರಮೇಶ್ ಹತ್ಯೆಯಲ್ಲೂ ರಾಜಕಾರಣ ಮಾಡ್ತಿದ್ದಾರೆ,’ ಎಂದು ಅಕ್ರೋಶ ವ್ಯಕ್ತಪಡಿಸಿದ್ದಾರೆ.

ಕದಿರೇಶ್ ಕೊಲೆಗೆ ಅರವಿಂದ ಲಿಂಬಾವಳಿ ಪ್ರತಿಕ್ರಿಯೆ:

ವಿಧಾನಸೌಧದ ಮಗ್ಗುಲಲ್ಲೇ ಬರ್ಬರ ಹತ್ಯೆಯಾಗಿದೆ, ಬೆಂಗಳೂರಿನಲ್ಲೇ ಈ ರೀತಿ ನಡೆಯುತ್ತಿರುವುದು ಆಘಾತ ತಂದಿದೆ. ಕದಿರೇಶ್ ಬಿಜೆಪಿ‌ ಕಾರ್ಯಕರ್ತ ಎಂಬ ಕಾರಣಕ್ಕೆ ಕೊಲೆಯಾಗಿರಬಹುದು, ಎಂದು ಶಾಸಕ ಅರವಿಂದ ಲಿಂಬಾವಳಿ ಹೇಳಿದ್ದಾರೆ.

ವಾರ್ಡ್ ನಂಬರ್ 138 ಛಲವಾದಿ ಪಾಳ್ಯರ ಕಾರ್ಪೋರೇಟರ್​ ರೇಖಾ ಪತಿ ಕದಿರೇಶನ್’ನನ್ನು ದುಷ್ಕರ್ಮಿಗಳು ಹಾಡುಹಗಲೇ ಕೊಚ್ಚಿ ಹತ್ಯೆ ಮಾಡಿದ್ದಾರೆ. ಸಂಜೆ 4 ಗಂಟೆ ವೇಳೆಗೆ ಕಾಟನ್​ಪೇಟೆಯ ಅಂಜಿನಪ್ಪ ಗಾರ್ಡನ್​​ನಲ್ಲಿ ಕದಿರೇಶ್​ ಹತ್ಯೆ ನಡೆದಿದೆ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ನಡೆದಿದೆ ಎಂದು ಶಂಕಿಸಲಾಗಿದೆ.

ಮೃತ ಕದಿರೇಶ್ ಕಾಟನ್​ಪೇಟೆಯಲ್ಲಿ 2002ರಲ್ಲೇ ರೌಡಿ ಶೀಟರ್ ಖಾತೆ ತೆರೆದಿದ್ದ. ಕದಿರೇಶ್​​ ವಿರುದ್ಧ ಹಲವಾರು ಶ್ರೀರಾಂಪುರ, ಕಾಟನ್​ಪೇಟೆ’ಗಳಲ್ಲಿ ಕೇಸ್’ಗಳು ದಾಖಲಾಗಿತ್ತು. ಒಟ್ಟು 15 ಪ್ರಕರಣಗಳಲ್ಲಿ ಕದಿರೇಶ್ ಆರೋಪಿಯಾಗಿದ್ದ ಎಂದು ಹೇಳಲಾಗಿದೆ.

ಕದಿರೇಶ್ ವಿರುದ್ಧದ 5 ಪ್ರಕರಣಗಳು ಖುಲಾಸೆಯಾಗಿದ್ದು, ಇನ್ನೂ 10 ಪ್ರಕರಣಗಳ ವಿಚಾರಣೆ ನಡೆಯುತ್ತಿತ್ತು. ಕದಿರೇಶ್​​ ವಿರುದ್ಧ ಕೊಲೆ, ಕೊಲೆಯತ್ನ. ಹಲ್ಲೆ ಬೆದರಿಕೆ ದೂರುಗಳಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಯಾವುದೇ ಕ್ಷಣದಲ್ಲಾದರೂ ಡಿ.ಕೆ. ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಉದಯ ಕದಲೂರು ಓಪನ್ ಹೇಳಿಕೆ
ಸಿಲ್ಕ್ ಬೋರ್ಡ್- ಕೆ.ಆರ್ ಪುರ ಮೆಟ್ರೋ ನಿಲ್ದಾಣದವರೆಗೂ ಹೈಟೆಕ್ ಹೊರವರ್ತುಲ ರಸ್ತೆ ಅಭಿವೃದ್ಧಿಗಾಗಿ ₹307 ಕೋಟಿ ಅನುಮೋದನೆ