
ಬೆಂಗಳೂರು : ಮೈತ್ರಿ ಸರ್ಕಾರದಲ್ಲಿ ಶಾದಿ ಭಾಗ್ಯ ಯೋಜನೆ ಮೂಲೆಗುಂಪು ಮಾಡಿ, ಅನುದಾನ ಕಡಿತ ಮಾಡಲಾಗಿದೆ ಎಂದು ಸಚಿವ ಜಮೀರ್ ಅಹಮದ್ ಅವರು ಸಿಎಂ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.
ಈ ಸಂಬಂಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮಾಹಿತಿ ನೀಡಿದ್ದು, ಶಾದಿ ಭಾಗ್ಯ ಯೋಜನೆಗೆ ನೀವು ಮಂಡಿಸಿದ ಬಜೆಟ್ ನಲ್ಲಿ125 ಕೋಟಿ ಅನುದಾನ ಮೀಸಲಿಡಲಾಗಿತ್ತು. ಆದರೆ ಕುಮಾರಸ್ವಾಮಿ ಅವರ ಬಜೆಟ್ ನಲ್ಲಿ ಕೇವಲ 55 ಕೋಟಿ ಮಿಸಲಿರಿಸಲಾಗಿದೆ ಎಂದು ಹೇಳಿದ್ದಾರೆ.
ಬಜೆಟ್ ಮಂಡನೆ ಬಳಿಕ ಸಚಿವ ಖಾದರ್ ಅಲ್ಪಸಂಖ್ಯಾತರ ಕಲ್ಯಾಣಕ್ಕೆ ಹಣಕಾಸಿನ ನೆರವು ಬಗ್ಗೆ ಪ್ರಶ್ನಿಸಿದ್ದರು. ಎಚ್.ಡಿ ರೇವಣ್ಣ ಅವರ ಗಮನಕ್ಕೆ ತಂದು ಸರಿಪಡಿಸಲು ಮನವಿ ಮಾಡಿದ್ದರು. ನಾನು ಕುಮಾರಸ್ವಾಮಿ ಅವರ ಗಮನಕ್ಕೆ ತಂದಿದ್ದೆ. ಈ ವೇಳೆ ಸಿದ್ದರಾಮಯ್ಯ ಅವರು ಬಜೆಟ್ ನಲ್ಲಿ ಹಣ ಇಟ್ಟಿರುವ ಹಣದ ಪ್ರಮಾಣ ಮುಂದುವಿರಯುತ್ತದೆ ಎಂದು ಸಿಎಂ ಭರವಸೆ ನೀಡಿದ್ದರು.
ಆದರೆ ಇದೀಗ ಅನುದಾನವನ್ನು 125 ಕೋಟಿಯಿಂದ 55 ಕೋಟಿಗೆ ಕಡಿತಗೊಳಿಸಿದ್ದಾರೆ. ಒಟ್ಟು 33592 ಅರ್ಜಿಗಳು ಬಾಕಿ ಇದ್ದು, 120 ಕೋಟಿ ಹಣ ಈ ಅರ್ಜಿಗಳ ವಿಲೇವಾರಿಗೆ ಬೇಕಾಗಿದೆ. ಆದರೆ ಮುಖ್ಯಮಂತ್ರಿ ಅನುದಾನ ಕಡಿತ ಮಾಡಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ. ಈ ರೀತಿ ಮಾಡಿರುವುದು ಲೋಕಸಭಾ ಚುನಾವಣೆ ಮೇಲೆ ಪರಿಣಾಮ ಬೀರಲಿದೆ ಎಂದು ಜಮೀರ್ ಅಹಮದ್ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.