
ಹುಬ್ಬಳ್ಳಿ : ದೇಶದಲ್ಲಿ ನಿರಂತರವಾಗಿ ಏರಿಕೆಯಾಗುತ್ತಿರುವ ಪೆಟ್ರೋಲ್, ಡೀಸೆಲ್ ದರದ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಸಚಿವ ಜಮೀರ್ ಅಹಮದ್ ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿ ಯಾವಾಗಲು ಅಚ್ಛೆ ದಿನ್ ಎಂದು ಹೇಳುತ್ತಿದ್ದರು. ಇದೇನಾ ಅಚ್ಛೆ ದಿನ್ ಎಂದು ಪ್ರಶ್ನೆ ಮಾಡಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಮೋದಿ ಯಾವಾಗಲೂ ಮನ್ ಕೀ ಬಾತ್ ಎನ್ನುತ್ತಿದ್ದರು. ನಮಗೆ ಮನ್ ಕೀ ಬಾತ್ ಬೇಕಿಲ್ಲ ಕಾಮ್ ಕೀ ಬಾತ್ ಬೇಕು. ದೇಶದ ಅಭಿವೃದ್ದಿಗೆ ಮೋದಿ ಮೊದಲು ಒತ್ತು ಕೊಡಲಿ ಎಂದು ಹೇಳಿದ್ದಾರೆ. ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆಯಾಗಿದ್ದು, ಜನರಿಗೆ ಕೇಂದ್ರದ ಆಡಳಿತದ ಬಗ್ಗೆ ಅರಿವಾಗಲಿ ಎಂದು ಸುಮ್ಮನಿದ್ದೇವೆ ಎಂದು ಹೇಳಿದ್ದಾರೆ.
ಇನ್ನು ಇದೇ ವೇಳೆ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದ ಅವರು ಪದೇ ಪದೇ ಸರ್ಕಾರ ಬೀಳುತ್ತೆ ಎಂದು ಅವರು ಹೇಳುತ್ತಾರೆ. ಆದರೆ ನಮ್ಮ ಸರ್ಕಾರ ಐದು ವರ್ಷ ಆಡಳಿತ ನಡೆಸುತ್ತೆ ಎಂದಿದ್ದಾರೆ. ಬಿಜೆಪಿಯವರು ಸರಕಾರ ಬೀಳುತ್ತೆ ಅಂತಾ ಹಗಲುಗನಸು ಕಾಣುತ್ತಿದ್ದಾರೆ ಎಂದು ಹೇಳಿದ್ದಾರೆ.
ಇನ್ನು ಎಂಪಿ ಚುನಾವಣೆಗೆ ನಾವು ಸಕಲ ಸಿದ್ಧತೆ ನಡೆಸಿದ್ದೇವೆ. ಹಾವೇರಿ ಜಿಲ್ಲೆಯ ಮೂರು ಸ್ಥಳೀಯ ಸಂಸ್ಥೆ ಚುನಾವಣೆ ಅತಂತ್ರವಾಗಿದೆ. ಆದರೆ ರಾಣೆಬೆನ್ನೂರು, ಹಿರೇಕರೂರಲ್ಲಿ, ಹಾವೇರಿಯಲ್ಲಿ ಅಧಿಕಾರ ಪಡೆಯುತ್ತೇವೆ ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.