ಮೂವರು ಕ್ರೀಡಾ ಸಾಧಕರಿಗೆ ರಾಜ್ಯೋತ್ಸವ ಗರಿ

Published : Nov 02, 2019, 11:11 AM ISTUpdated : Nov 02, 2019, 03:53 PM IST
ಮೂವರು ಕ್ರೀಡಾ ಸಾಧಕರಿಗೆ ರಾಜ್ಯೋತ್ಸವ ಗರಿ

ಸಾರಾಂಶ

ಕ್ರೀಡಾ ಕ್ಷೇತ್ರದಲ್ಲಿ ಅನನ್ಯ ಸಾಧನೆ ಮಾಡಿದ ಮೂವರು ದಿಗ್ಗಜರಿಗೆ ಈ ಬಾರಿಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ. ಈ ಕುರಿತಾದ ವರದಿ ಇಲ್ಲಿದೆ ನೋಡಿ...

ಬೆಂಗಳೂರು(ನ.02): ಕ್ರೀಡೆಯಲ್ಲಿ ಮಹತ್ತರ ಸಾಧನೆ ಮಾಡಿದ ಕರ್ನಾಟಕದ ಮೂವರು ಕ್ರೀಡಾಪಟುಗಳಾದ ವಿಶ್ವನಾಥ್ ಭಾಸ್ಕರ್ ಗಾಣಿಗ, ವಿ ಕುಟ್ಟಪ್ಪ ಹಾಗೂ ನಂದಿತಾ ನಾಗನಗೌಡರ್ ಅವರಿಗೆ ಶುಕ್ರವಾರ ಪ್ರಸಕ್ತ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು.

"

ಕನ್ನಡ ರಾಜ್ಯೋತ್ಸವಕ್ಕೆ ನಿಮ್ಮ ನೆಚ್ಚಿನ ನಟರ ಶುಭಾಶಯ, ಯಶ್ ಖಡಕ್ ಡೈಲಾಗ್

ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಕಾಮನ್‌ವೆಲ್ತ್ ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ವಿಶ್ವನಾಥ್, 2 ಚಿನ್ನ, 2 ಬೆಳ್ಳಿಯೊಂದಿಗೆ ವಿಶ್ವ ದಾಖಲೆ ನಿರ್ಮಿಸಿದ್ದರು. ಭಾರತ ಬಾಕ್ಸಿಂಗ್ ತಂಡದ ಕೋಚ್ ಆಗಿರುವ ಚೇನಂಡ ಅಚ್ಚಯ್ಯ ಕುಟ್ಟಪ್ಪ ಹಾಗೂ ಏಷ್ಯಾ, ಯುರೋಪ್ ಮತ್ತು ಆಫ್ರಿಕಾ ಖಂಡಗಳಲ್ಲಿರುವ ಅತಿ ಎತ್ತರದ ಶಿಖರಗಳ ತುತ್ತ ತುದಿಯಲ್ಲಿ ಭಾರತದ ಧ್ವಜವನ್ನು ಹಾರಿಸಿರುವ ಪರ್ವತಾರೋಹಿ ಹುಬ್ಬಳ್ಳಿಯ ನಂದಿತಾ ನಾಗನಗೌಡರ ಅವರ ಕ್ರೀಡಾ ಸಾಧನೆ ಪರಿಗಣಿಸಿ ಪ್ರಶಸ್ತಿ ನೀಡಲಾಯಿತು.

ಕ್ರೀಡೆ ಮಾತ್ರವಲ್ಲದೇ ಸಾಹಿತ್ಯ, ಪತ್ರಿಕೋದ್ಯಮ, ಸಂಗೀತ ಹೀಗೆ ವಿವಿಧ ಕ್ಷೇತ್ರದಲ್ಲಿ ಮಹತ್ವದ ಸಾಧನೆ ಮಾಡಿದ ಒಟ್ಟು 62 ಸಾಧಕರನ್ನು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಗೌರವಿಸಿದರು.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಂಗಳೂರಿನಲ್ಲಿ ವರ್ಲ್ಡ್ ಟೆನಿಸ್ ಲೀಗ್; ಟೂರ್ನಿಯ ವೇಳಾಪಟ್ಟಿ ಪ್ರಕಟ, ಟಿಕೆಟ್ ಬುಕಿಂಗ್ ಆರಂಭ
ಸತತ ಎರಡನೇ ಬಾರಿಗೆ ಭಾರತ ಮಹಿಳೆಯರಿಗೆ ಒಲಿದ ಕಬಡ್ಡಿ ವಿಶ್ವಕಪ್ ಚಾಂಪಿಯನ್ ಪಟ್ಟ!