
ಮೆಲ್ಬರ್ನ್(ಜ.19): ಆಸ್ಪ್ರೇಲಿಯನ್ ಓಪನ್ನಲ್ಲಿ ಆಡಲು ಮೆಲ್ಬರ್ನ್ಗೆ ತೆರಳಿರುವ ಟೆನಿಸಿಗರ ಪೈಕಿ ಕಠಿಣ ಕ್ವಾರಂಟೈನ್ಗೆ ಒಳಪಟ್ಟ ಟೆನಿಸಿಗರ ಸಂಖ್ಯೆ 72ಕ್ಕೆ ಏರಿಕೆಯಾಗಿದೆ.
ಆಟಗಾರರನ್ನು ಕರೆತಂದ ಮತ್ತೊಂದು ವಿಮಾನದಲ್ಲಿ ಪ್ರಯಾಣಿಸಿದ ವ್ಯಕ್ತಿಯೊಬ್ಬರಿಗೆ ಸೋಂಕು ತಗುಲಿರುವು ಕಾರಣ ಆಟಗಾರರನ್ನು ಪ್ರಾಥಮಿಕ ಸಂಪರ್ಕಿತರು ಎಂದು ಗುರುತಿಸಿ ಕ್ವಾರಂಟೈನ್ಗೆ ಒಳಪಡಿಸಲಾಗಿದೆ.
ಥಾಯ್ಲೆಂಡ್ ಓಪನ್ ಬ್ಯಾಡ್ಮಿಂಟನ್: ಭಾರತದ ಸವಾಲು ಅಂತ್ಯ
ಆಟಗಾರರು ತಾವು ಉಳಿದುಕೊಂಡಿರುವ ಹೋಟೆಲ್ಗಳಲ್ಲಿ ಕಠಿಣ ನಿಯಮ ವಿಧಿಸಲಾಗಿದೆ. ಅನಗತ್ಯವಾಗಿ ತಮ್ಮ ಕೊಠಡಿಯ ಬಾಗಿಲು ತೆರೆದರೆ 20,000 ಆಸ್ಪ್ರೇಲಿಯನ್ ಡಾಲರ್ (11 ಲಕ್ಷ ರು.) ದಂಡ ವಿಧಿಸುವುದಾಗಿ ಆಟಗಾರರಿಗೆ ಆಯೋಜಕರು ಎಚ್ಚರಿಸಿದ್ದಾರೆ.
ಇಂದಿನಿಂದ ಥಾಯ್ಲೆಂಡ್ ಓಪನ್ ಬ್ಯಾಡ್ಮಿಂಟನ್ ಟೂರ್ನಿ
ಬ್ಯಾಂಕಾಕ್: ಭಾರತದ ತಾರಾ ಶಟ್ಲರ್ಗಳಾದ ಪಿ.ವಿ. ಸಿಂಧು ಹಾಗೂ ಸೈನಾ ನೆಹ್ವಾಲ್, ಮಂಗಳವಾರದಿಂದ ಇಲ್ಲಿ ಆರಂಭವಾಗಲಿರುವ ಥಾಯ್ಲೆಂಡ್ ಓಪನ್ ಸೂಪರ್ 1000 ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಭಾಗವಹಿಸಲಿದ್ದಾರೆ.
ಕಳೆದ ವಾರ ನಡೆದಿದ್ದ ಏಷ್ಯಾ ಹಂತದ ಮೊದಲ ಟೂರ್ನಿಯಲ್ಲಿ ಭಾರತದ ಶಟ್ಲರ್ಗಳು ನೀರಸ ಪ್ರದರ್ಶನ ತೋರಿದ್ದರು. ಈ ಟೂರ್ನಿಯಲ್ಲಿ ಉತ್ತಮ ಪ್ರದರ್ಶನದ ಮೂಲಕ ಫಾರ್ಮ್ಗೆ ಮರಳುವ ಉತ್ಸಾಹದಲ್ಲಿ ಭಾರತದ ಶಟ್ಲರ್ಗಳಿದ್ದಾರೆ. ಸಿಂಧು, ಮೊದಲ ಸುತ್ತಲ್ಲಿ ವಿಶ್ವ ನಂ.12 ಥಾಯ್ಲೆಂಡ್ನ ಬುಸ್ನಾನ್ರನ್ನು ಎದುರಿಸಿದರೆ, ಸೈನಾ, 4ನೇ ಶ್ರೇಯಾಂಕಿತೆ ರಚನಾಕ್ ಇಂಟನಾನ್ ಎದುರು ಸೆಣಸಲಿದ್ದಾರೆ. ಉಳಿದಂತೆ ಪುರುಷರ ವಿಭಾಗದಲ್ಲಿ ಶ್ರೀಕಾಂತ್, ಪ್ರಣೀತ್, ಕಶ್ಯಪ್, ಪ್ರಣಯ್, ಸೌರಭ್ ಹಾಗೂ ಸಮೀರ್ ಶುಭಾರಂಭದ ನಿರೀಕ್ಷೆಯಲ್ಲಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.