ಖೇಲ್‌ ರತ್ನ ಪ್ರಶಸ್ತಿಗೆ ಶ್ರೀಕಾಂತ್, ಪ್ರಣೀತ್ ಹೆಸರು ಶಿಫಾರಸು

Suvarna News   | Asianet News
Published : Jul 01, 2021, 06:09 PM IST
ಖೇಲ್‌ ರತ್ನ ಪ್ರಶಸ್ತಿಗೆ ಶ್ರೀಕಾಂತ್, ಪ್ರಣೀತ್ ಹೆಸರು ಶಿಫಾರಸು

ಸಾರಾಂಶ

* ಖೇಲ್‌ ರತ್ನ ಪ್ರಶಸ್ತಿಗೆ ಶ್ರೀಕಾಂತ್, ಪ್ರಣೀತ್ ಹೆಸರು ಶಿಫಾರಸು * ಒಲಿಂಪಿಕ್ಸ್‌ಗೆ ಅರ್ಹತೆ ಪಡೆದಿರುವ ಸಾಯಿ ಪ್ರಣೀತ್ * 2019ರ ವಿಶ್ವ ಬ್ಯಾಡ್ಮಿಂಟನ್‌ ಚಾಂಪಿಯನ್‌ಶಿಪ್‌ನಲ್ಲಿ ಕಂಚಿನ ಪದಕ ಜಯಿಸಿದ್ದ ಬಿ. ಸಾಯಿ ಪ್ರಣೀತ್

ನವದೆಹಲಿ(ಜು.01): ಭಾರತದ ತಾರಾ ಬ್ಯಾಡ್ಮಿಂಟನ್ ಆಟಗಾರರಾದ ಕಿದಂಬಿ ಶ್ರೀಕಾಂತ್, ಬಿ. ಸಾಯಿ ಪ್ರಣೀತ್‌ಗೆ ರಾಜೀವ್‌ ಗಾಂಧಿ ಖೇಲ್‌ ರತ್ನ ಪ್ರಶಸ್ತಿ ಹಾಗೂ ಎಚ್.ಎಸ್‌. ಪ್ರಣಯ್, ಪ್ರಣವ್ ಜೆರ್ರಿ ಚೋಪ್ರಾ ಹಾಗೂ ಸಮೀರ್ ವರ್ಮಾ ಅವರಿಗೆ ಅರ್ಜುನ ಪ್ರಶಸ್ತಿಗೆ ಭಾರತೀಯ ಬ್ಯಾಡ್ಮಿಂಟನ್‌ ಸಂಸ್ಥೆ ಶಿಫಾರಸು ಮಾಡಿದೆ.

2017ರಲ್ಲಿ 4 ಪ್ರಶಸ್ತಿಗಳನ್ನು ಗೆದ್ದಿದ್ದ ಶ್ರೀಕಾಂತ್ ಆ ಬಳಿಕ ತನ್ನ ಲಯವನ್ನು ಕಾಪಾಡಿಕೊಳ್ಳುವಲ್ಲಿ ವಿಫಲರಾಗಿದ್ದಾರೆ. ಹೀಗಾಗಿ ಟೋಕಿಯೋ ಒಲಿಂಪಿಕ್ಸ್‌ಗೆ ಅರ್ಹತೆಗಿಟ್ಟಿಸಲು ವಿಫಲರಾಗಿದ್ದರು. ಮತ್ತೊಂದೆಡೆ 2019ರ ವಿಶ್ವ ಬ್ಯಾಡ್ಮಿಂಟನ್‌ ಚಾಂಪಿಯನ್‌ಶಿಪ್‌ನಲ್ಲಿ ಕಂಚಿನ ಪದಕ ಜಯಿಸಿದ್ದ ಬಿ. ಸಾಯಿ ಪ್ರಣೀತ್, ಪುರುಷರ ಸಿಂಗಲ್ಸ್‌ ವಿಭಾಗದಲ್ಲಿ ಟೋಕಿಯೋ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಏಕೈಕ ಭಾರತೀಯ ಶಟ್ಲರ್ ಎನಿಸಿದ್ದಾರೆ.

ಖೇಲ್‌ ರತ್ನ, ಅರ್ಜುನ ಪ್ರಶಸ್ತಿಗೆ ಓರ್ವ ಕನ್ನಡಿಗ ಸೇರಿ ಐವರು ಟೀಂ ಇಂಡಿಯಾ ಕ್ರಿಕೆಟಿಗರ ಹೆಸರು ಶಿಫಾರಸು..!

2021ನೇ ಸಾಲಿನ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು ಕ್ರೀಡಾ ಹಾಗೂ ಯುವಜನ ಇಲಾಖೆ ವಿಸ್ತರಿಸಿದೆ. ಈ ಮೊದಲು ರಾಷ್ಟ್ರೀಯ ಕ್ರೀಡಾ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಜೂನ್‌ 21 ಕಡೆಯ ದಿನಾಂಕ ನಿಗದಿ ಮಾಡಲಾಗಿತ್ತು. 

ಕಳೆದ ವರ್ಷ ಮನೀಕಾ ಭಾತ್ರ, ರೋಹಿತ್ ಶರ್ಮಾ, ವಿನೇಶ್ ಫೊಗಟ್‌, ರಾಣಿ ರಾಂಪಾಲ್‌ ಮತ್ತು ಮರಿಯಪ್ಪನ್‌ ತಂಗವೇಲು ಹೀಗೆ ಐದು ಮಂದಿ ಖೇಲ್‌ ರತ್ನ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈ ಮೂಲಕ ಒಂದೇ ವರ್ಷದಲ್ಲಿ ಮೊದಲ ಬಾರಿಗೆ 5 ಮಂದಿ ಅತ್ಯುನ್ನತ ಕ್ರೀಡಾ ಪ್ರಶಸ್ತಿ ಪಡೆದುಕೊಂಡಿದ್ದರು.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Mock Auction: 30.5 ಕೋಟಿ ರೂಪಾಯಿ ದಾಖಲೆ ಮೊತ್ತಕ್ಕೆ ಕೆಕೆಆರ್‌ಗೆ ಕ್ಯಾಮರೂನ್‌ ಗ್ರೀನ್‌!
29 ವರ್ಷದಲ್ಲಿ ಇದೇ ಮೊದಲ ಬಾರಿಗೆ ಸ್ಕ್ವಾಷ್‌ ವಿಶ್ವಕಪ್‌ ಗೆದ್ದ ಭಾರತ!