
ಬ್ಯಾಂಕಾಕ್(ಜ.29): ಭಾರತದ ಶಟ್ಲರ್ಗಳಾದ ಪಿ.ವಿ.ಸಿಂಧು ಹಾಗೂ ಕಿದಂಬಿ ಶ್ರೀಕಾಂತ್ ವಿಶ್ವ ಟೂರ್ ಫೈನಲ್ಸ್ ಟೂರ್ನಿಯ ಸೆಮಿಫೈನಲ್ ರೇಸ್ನಿಂದ ಹೊರಬಿದ್ದಿದ್ದಾರೆ. ಗುರುವಾರ ನಡೆದ ಗುಂಪು ಹಂತದ 2ನೇ ಪಂದ್ಯದಲ್ಲೂ ಸಿಂಧು ಹಾಗೂ ಶ್ರೀಕಾಂತ್ ಸೋಲು ಅನುಭವಿಸಿದರು.
ಮಹಿಳಾ ಸಿಂಗಲ್ಸ್ನ ‘ಬಿ’ ಗುಂಪಿನ ಪಂದ್ಯದಲ್ಲಿ ವಿಶ್ವ ಚಾಂಪಿಯನ್ ಸಿಂಧು ಥಾಯ್ಲೆಂಡ್ನ ರಚನಾಕ್ ಇಂಟನಾನ್ ವಿರುದ್ಧ 18-21, 13-21 ನೇರ ಗೇಮ್ಗಳಲ್ಲಿ ಪರಾಭವಗೊಂಡರು. ಮೊದಲ ಪಂದ್ಯದಲ್ಲಿ ಸಿಂಧು, ತೈಪೆಯ ತೈ ತ್ಸು ಯಿಂಗ್ ವಿರುದ್ಧ ಸೋಲುಂಡಿದ್ದರು. ಅಂತಿಮ ಪಂದ್ಯದಲ್ಲಿ ಭಾರತೀಯ ತಾರೆ, ಥಾಯ್ಲೆಂಡ್ನ ಪೊರ್ನ್ಪಾವಿ ಚೊಚುವಾಂಗ್ ವಿರುದ್ಧ ಸೆಣಸಲಿದ್ದಾರೆ.
ವಿಶ್ವ ಟೂರ್ ಫೈನಲ್ಸ್: ಸಿಂಧು, ಶ್ರೀಕಾಂತ್ಗೆ ಆರಂಭಿಕ ಆಘಾತ
ಪುರುಷರ ಸಿಂಗಲ್ಸ್ನ ‘ಬಿ’ ಗುಂಪಿನ 2ನೇ ಪಂದ್ಯದಲ್ಲಿ ಶ್ರೀಕಾಂತ್, ಚೈನೀಸ್ ತೈಪೆಯ ವಾಂಗ್ ತ್ಸು ವೀ ವಿರುದ್ಧ 21-19, 9-21, 19-21 ಗೇಮ್ಗಳಲ್ಲಿ ಸೋಲುಂಡರು. ಸತತ 2ನೇ ಪಂದ್ಯದಲ್ಲಿ ಮೊದಲ ಗೇಮ್ ಜಯಿಸಿದ ಹೊರತಾಗಿಯೂ ಶ್ರೀಕಾಂತ್ಗೆ ಪಂದ್ಯ ಗೆಲ್ಲಲು ಸಾಧ್ಯವಾಗಲಿಲ್ಲ. ಶುಕ್ರವಾರ ಗುಂಪು ಹಂತದ 3ನೇ ಹಾಗೂ ಅಂತಿಮ ಪಂದ್ಯದಲ್ಲಿ ಹಾಂಕಾಂಗ್ನ ಆ್ಯಂಗುಸ್ ಕಾ ಲಾಂಗ್ ವಿರುದ್ಧ ಸ್ಪರ್ಧಿಸಲಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.