ಕೊಲೆ ಕೇಸ್‌: ಕುಸ್ತಿಪಟು ಸುಶೀಲ್‌ ಕುಮಾರ್ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆ..!

Kannadaprabha News   | Asianet News
Published : Aug 03, 2021, 12:51 PM IST
ಕೊಲೆ ಕೇಸ್‌: ಕುಸ್ತಿಪಟು ಸುಶೀಲ್‌ ಕುಮಾರ್ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆ..!

ಸಾರಾಂಶ

* ಛತ್ರಸಾಲ್‌ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಶೀಲ್ ಕುಮಾರ್ ಮೇಲೆ ಚಾರ್ಜ್‌ಶೀಟ್ ಸಲ್ಲಿಕೆ * ದೆಹಲಿ ಪೊಲೀಸರಿಂದ ಮ್ಯಾಜಿಸ್ಪ್ರೇಟ್‌ ಮುಂದೆ 170 ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆ * ಮೇ.04ರಂದು ಛತ್ರಸಾಲ್‌ನಲ್ಲಿ ಜೂನಿಯರ್ ಕುಸ್ತಿಪಟುವಿನ ಹತ್ಯೆಯಲ್ಲಿ ಸುಶೀಲ್ ಕುಮಾರ್ ಪಾತ್ರ

ನವದೆಹಲಿ(ಆ.03): ಕುಸ್ತಿಪಟು ಸಾಗರ್‌ ಧನಕರ್‌ರ ಕೊಲೆ ಪ್ರಕರಣದಲ್ಲಿ ದೆಹಲಿ ಪೊಲೀಸರು ಮ್ಯಾಜಿಸ್ಪ್ರೇಟ್‌ ಮುಂದೆ 170 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿದ್ದು, ದಿಗ್ಗಜ ಕುಸ್ತಿಪಟು, 2 ಬಾರಿ ಒಲಿಂಪಿಕ್‌ ಪದಕ ವಿಜೇತ ಸುಶೀಲ್‌ ಕುಮಾರ್‌ರನ್ನು ಪ್ರಮುಖ ಆರೋಪಿಯಾಗಿ ಹೆಸರಿಸಲಾಗಿದೆ. 

ಸುಶೀಲ್‌ ಕುಮಾರ್ ಜೊತೆ 12 ಜನರ ಹೆಸರನ್ನು ಚಾರ್ಜ್‌ಶೀಟ್‌ನಲ್ಲಿ ಸೇರಿಸಲಾಗಿದೆ. ಮೂಲಗಳ ಪ್ರಕಾರ ಪೊಲೀಸರು ಪ್ರಕರಣದಲ್ಲಿ 50 ಮಂದಿಯನ್ನು ಸಾಕ್ಷಿಯಾಗಿ ಹಾಜರುಪಡಿಸಲು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ. ಮೇ 4ರಂದು ದೆಹಲಿಯ ಛತ್ರಸಾಲ್‌ ಕ್ರೀಡಾಂಗಣದಲ್ಲಿ ಕೊಲೆ ನಡೆದಿತ್ತು. 

ಕುಸ್ತಿಪಟು ಸುಶೀಲ್ ಕುಮಾರ್ ಹುಡುಕಿಕೊಟ್ಟವರಿಗೆ 1 ಲಕ್ಷ ರೂ ಬಹುಮಾನ..!

ಛತ್ರಸಾಲ್‌ ಸ್ಟೇಡಿಯಂನಲ್ಲಿ ಅಭ್ಯಾಸ ನಡೆಸುತ್ತಿದ್ದ ಜೂನಿಯರ್ ನ್ಯಾಷನಲ್ ಕುಸ್ತಿ ಚಾಂಪಿಯನ್‌ ಸಾಗರ್ ರಾಣಾ ಅವರನ್ನು ಸುಶೀಲ್ ಕುಮಾರ್ ಹಾಗೂ ಮತ್ತವರ ಸಂಗಡಿಗರು ಹತ್ಯೆ ಮಾಡಿದ್ದಾರೆ. ಈ ಸಂಬಂಧ ಎರಡು ಬಾರಿ ಒಲಿಂಪಿಕ್ಸ್‌ ಪದಕ ವಿಜೇತ ಸುಶೀಲ್ ಕುಮಾರ್ ಸದ್ಯ ತಿಹಾರ್ ಜೈಲಿನಲ್ಲಿ ಕಂಬಿ ಎಣಿಸುತ್ತಿದ್ದಾರೆ.

ಕುಸ್ತಿ ಪಟು ಸುಶೀಲ್‌ ಹತ್ಯೆಗೆ ಬೆದರಿಕೆ ಹಾಕಿದ್ದ ರೌಡಿ ಬಂಧನ

ನವದೆಹಲಿ: ಭಾರತದ ಪದಕ ವಿಜೇತ ಕುಸ್ತಿ ಪಟು ಸುಶೀಲ್‌ ಕುಮಾರ್‌ ಅವರಿಗೆ ಹತ್ಯೆ ಬೆದರಿಕೆ ಹಾಕಿದ್ದ ಹಾಗೂ ಪಂಜಾಬ್‌, ದೆಹಲಿ, ಹರ್ಯಾಣ ಮತ್ತು ರಾಜಸ್ಥಾನಗಳಲ್ಲಿನ ಹಲವು ಅಪರಾಧ ಚಟುವಟಿಕೆಗಳಲ್ಲಿ ಬೇಕಾಗಿದ್ದ ಕಾಲಾ ಜತೇಡಿ ಎಂಬ ರೌಡಿಶೀಟರ್‌ನನ್ನು ದಿಲ್ಲಿಯ ವಿಶೇಷ ಪೊಲೀಸ್‌ ತಂಡ ಉತ್ತರ ಪ್ರದೇಶದ ಸಹಾರನ್‌ಪುರದಲ್ಲಿ ಬಂಧಿಸಿದ್ದಾರೆ.

ಅಲ್ಲದೆ ರಾಜಸ್ಥಾನದಲ್ಲಿ ಸುಲಿಗೆ, ಅಪಹರಣ ಮತ್ತು ಹತ್ಯೆ ಪ್ರಕರಣಗಳಲ್ಲಿ ತೊಡಗಿಸಿಕೊಂಡು ಲೇಡಿ ಡಾನ್‌ ಎಂದೇ ಕುಖ್ಯಾತಿ ಪಡೆದಿದ್ದ ಅನುರಾಧಾಳನ್ನು ಸಹ ದೆಹಲಿ ವಿಶೇಷ ಪೊಲೀಸ್‌ ಪಡೆ ಬಂಧಿಸಿದೆ. ವಿಶೇಷವೆಂದರೆ ಕಾಲಾ ಜತೇಡಿ ಹುಡುಕಿಕೊಟ್ಟವರಿಗೆ 7 ಲಕ್ಷ ರು. ಬಹುಮಾನ ಘೋಷಿಸಲಾಗಿದ್ದರೆ, ಮಹಿಳಾ ಡಾನ್‌ ಅನುರಾಧ ಸುಳಿವು ನೀಡಿದವರಿಗೆ 10 ಸಾವಿರ ರು. ಬಹುಮಾನ ಘೋಷಿಸಲಾಗಿತ್ತು.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಂಗಳೂರಿನಲ್ಲಿ ವರ್ಲ್ಡ್ ಟೆನಿಸ್ ಲೀಗ್; ಟೂರ್ನಿಯ ವೇಳಾಪಟ್ಟಿ ಪ್ರಕಟ, ಟಿಕೆಟ್ ಬುಕಿಂಗ್ ಆರಂಭ
ಸತತ ಎರಡನೇ ಬಾರಿಗೆ ಭಾರತ ಮಹಿಳೆಯರಿಗೆ ಒಲಿದ ಕಬಡ್ಡಿ ವಿಶ್ವಕಪ್ ಚಾಂಪಿಯನ್ ಪಟ್ಟ!