Murder Case: ಕುಸ್ತಿಪಟು ಸುಶೀಲ್‌ ಕುಮಾರ್‌ಗೆ ಜಾಮೀನು ನಿರಾಕರಣೆ

Published : Oct 06, 2021, 12:23 PM IST
Murder Case: ಕುಸ್ತಿಪಟು ಸುಶೀಲ್‌ ಕುಮಾರ್‌ಗೆ ಜಾಮೀನು ನಿರಾಕರಣೆ

ಸಾರಾಂಶ

* ಕೊಲೆ ಪ್ರಕರಣದ ಆರೋಪಿ ಸುಶೀಲ್‌ ಕುಮಾರ್‌ಗೆ ನಿರಾಸೆ * ಕುಸ್ತಿಪಟು ಸಾಗರ್‌ ಧನ್‌ಕರ್‌ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ಕುಸ್ತಿಪಟು ಸುಶೀಲ್ * ದೆಹಲಿಯ ಛತ್ರಸಾಲ್‌ ಕ್ರೀಡಾಂಗಣದಲ್ಲಿ ಮೇ.04ರಂದು ನಡೆದ ಕೊಲೆ

ನವದೆಹಲಿ(ಅ.06): ಕುಸ್ತಿಪಟು ಸಾಗರ್‌ ಧನ್‌ಕರ್‌ (Sagar Dhankar) ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಒಲಿಂಪಿಕ್‌ ಪದಕ ವಿಜೇತ ಕುಸ್ತಿಪಟು ಸುಶೀಲ್‌ ಕುಮಾರ್‌ (Sushil Kumar) ಗೆ ಜಿಲ್ಲಾ ರೋಹಿಣಿ ನ್ಯಾಯಾಲಯ ಜಾಮೀನು ನೀಡಲು ನಿರಾಕರಿಸಿದೆ. 

ಮೇ 4ರಂದು ದೆಹಲಿಯ ಛತ್ರಸಾಲ್‌ ಕ್ರೀಡಾಂಗಣದಲ್ಲಿ ನಡೆದ ಧನ್‌ಕರ್‌ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇ 23ರಂದು ಸುಶೀಲ್‌ ಬಂಧನಕ್ಕೊಳಗಾಗಿದ್ದರು. ಸೋಮವಾರ ಸುಶೀಲ್‌ ಕುಮಾರ್ ಅವರು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ಬಳಿಕ ಹೆಚ್ಚುವರಿ ಸೆಷನ್ಸ್‌ ನ್ಯಾಯಾಧೀಶ ಶಿವಾಜಿ ಆನಂದ್‌ ಜಾಮೀನು ನೀಡಲು ನಿರಾಕರಿಸಿದರು. 

ಕಬಡ್ಡಿ ಅಭಿಮಾನಿಗಳಿಗೆ ಗುಡ್‌ ನ್ಯೂಸ್‌: ಬೆಂಗಳೂರಿನಲ್ಲೇ ನಡೆಯಲಿದೆ ಸಂಪೂರ್ಣ ಪ್ರೊ ಕಬಡ್ಡಿ ಲೀಗ್..!

ಈ ನಡುವೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯದಲ್ಲೇ ಮತ್ತೊಂದು ಚಾಜ್‌ರ್‍ಶೀಟ್‌ ಸಲ್ಲಿಸಲಾಗುವುದು ಎಂದು ಪೊಲೀಸರು ದೆಹಲಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಆಗಸ್ಟ್ 2ರಂದು ಸಲ್ಲಿಸಲಾಗಿರುವ ಮೊದಲ ಚಾಜ್‌ರ್‍ಶೀಟ್‌ನಲ್ಲಿ 13 ಮಂದಿಯನ್ನು ಕೊಲೆ ಆರೋಪಿಗಳೆಂದು ಹೆಸರಿಸಲಾಗಿದೆ. ಇದರಲ್ಲಿ ಸುಶೀಲ್‌ ಪ್ರಮುಖ ಆರೋಪಿ ಎಂದು ಉಲ್ಲೇಖಿಸಲಾಗಿತ್ತು.

ವಿಶ್ವ ಶೂಟಿಂಗ್‌ನಲ್ಲಿ 14ರ ನಾಮ್ಯಗೆ ಚಿನ್ನದ ಪದಕ!

ಲಿಮಾ(ಪೆರು): ಐಎಸ್‌ಎಸ್‌ಎಫ್‌ ಕಿರಿಯರ ವಿಶ್ವ ಶೂಟಿಂಗ್‌ ಚಾಂಪಿಯನ್‌ಶಿಪ್‌ನಲ್ಲಿ (ISSF Shooting) ಭಾರತದ 14 ವರ್ಷದ ನಾಮ್ಯ ಕಪೂರ್‌ ಚಿನ್ನದ ಪದಕ ಗೆದ್ದು ಇತಿಹಾಸ ಬರೆದಿದ್ದಾರೆ. ಮಹಿಳೆಯರ 25 ಮೀ. ಪಿಸ್ತೂಲ್‌ ಸ್ಪರ್ಧೆಯ ಫೈನಲ್‌ನಲ್ಲಿ ಮೊದಲ ಸ್ಥಾನ ಪಡೆದ ನಾಮ್ಯ, ವಿಶ್ವಕಪ್‌ನಲ್ಲಿ ಪದಕ ಗೆದ್ದ ಭಾರತದ ಅತಿಕಿರಿಯ ಶೂಟರ್‌ ಎನ್ನುವ ಹಿರಿಮೆಗೆ ಪಾತ್ರರಾಗಿದ್ದಾರೆ. 

ಇದೇ ಸ್ಪರ್ಧೆಯಲ್ಲಿ ತಾರಾ ಶೂಟರ್‌ ಮನು ಭಾಕರ್‌ (Manu Bhaker) ಕಂಚು ಜಯಿಸಿದರು. ಇನ್ನು ಪುರುಷರ 50 ಮೀ. ರೈಫಲ್‌ 3 ಪೊಸಿಷನ್‌ ಫೈನಲ್‌ನಲ್ಲಿ ವಿಶ್ವ ದಾಖಲೆಯ 463.4 ಅಂಕ ಗಳಿಸಿದ ಐಶ್ವರ್ಯ ಸಿಂಗ್‌ ತೋಮರ್‌ ಚಿನ್ನದ ಪದಕಕ್ಕೆ ಮುತ್ತಿಟ್ಟರು. ಭಾರತ ಕೂಟದಲ್ಲಿ 8 ಚಿನ್ನ, 6 ಬೆಳ್ಳಿ ಹಾಗೂ 3 ಕಂಚು ಸೇರಿ ಒಟ್ಟು 17 ಪದಕಗಳನ್ನು ಗೆದ್ದು ಮೊದಲ ಸ್ಥಾನದಲ್ಲಿದೆ.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿಶ್ವ ನಂ.1 ಶಿ ಯುಖಿಗೆ ಶಾಕ್ ಕೊಟ್ಟ ಕನ್ನಡಿಗ ಆಯುಷ್ ಶೆಟ್ಟಿ: BWF ವಿಶ್ವ ಚಾಂಪಿಯನ್‌ಶಿಪ್ 2ನೇ ಸುತ್ತಿಗೆ ಎಂಟ್ರಿ
ಹಾಕಿ ವಿಶ್ವಕಪ್‌ 2026: 1975ರ ಬಳಿಕ ಮತ್ತೊಂದು ವಿಶ್ವಕಪ್‌ ಮೇಲೆ ಭಾರತದ ಕಣ್ಣು; ಭಾರತ-ಪಾಕ್‌ ಪಂದ್ಯ ಯಾವಾಗ?