ಕೊರೋನಾ ವೈರಸ್ ಭೀತಿಯಿಂದಾಗಿ ಎರಡನೇ ಹಂತದಲ್ಲಿ ಪ್ರಧಾನಿ ನರೇಂದ್ರ ಮೋದಿ ಎರಡನೇ ಹಂತದಲ್ಲಿ 19 ದಿನಗಳ ಕಾಲ ಲಾಕ್ಡೌನ್ ಘೋಷಿಸಿದ್ದಾರೆ. ಇದರ ಬೆನ್ನಲ್ಲೇ ಸಾಯ್ ಎಲ್ಲಾ ಕ್ರೀಡಾ ಶಿಬಿರಗಳನ್ನು ಅಮಾನತು ಮಾಡಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.
ನವದೆಹಲಿ(ಏ.15): ದೇಶಾದ್ಯಂತ ಎಲ್ಲಾ ಕ್ರೀಡಾ ಸಂಸ್ಥೆಗಳ ಶಿಬಿರಗಳನ್ನು ಮೇ 3ರ ವರೆಗೂ ಅಮಾನತುಗೊಳಿಸಲಾಗಿದೆ ಎಂದು ಮಂಗಳವಾರ ಭಾರತೀಯ ಕ್ರೀಡಾ ಪ್ರಾಧಿಕಾರ (ಸಾಯ್) ತಿಳಿಸಿದೆ. ಲಾಕ್ಡೌನ್ ವಿಸ್ತರಣೆಯಾಗಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಇಂಡಿಯಾ ಲಾಕ್ಡೌನ್ನಿಂದಾಗಿ ಸಾಯ್ ಎಲ್ಲಾ ಕ್ರೀಡಾ ಶಿಬಿರಗಳನ್ನು ಏಪ್ರಿಲ್ 14ರವರೆಗೆ ಸ್ಥಗಿತಗೊಳಿಸಲಾಗಿತ್ತು. ಇದೀಗ ಎರಡನೇ ಹಂತದಲ್ಲಿ 19 ದಿನಗಳ ಕಾಲ ಲಾಕ್ಡೌನ್ ವಿಸ್ತರಿಸಿರುವುದರಿಂದ ಮೇ 03ರವರೆಗೆ ಎಲ್ಲಾ ಕ್ರೀಡಾ ಶಿಬಿರಗಳನ್ನು ಅಮಾನತುಗೊಳಿಸಲು ತೀರ್ಮಾನಿಸಲಾಗಿದೆ ಎಂದು ಸಾಯ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.
ಬೆಂಗಳೂರು ಹಾಗೂ ಪಟಿಯಾಲ ಸಾಯ್ ಕೇಂದ್ರಗಳಲ್ಲಿ ಅಭ್ಯಾಸ ನಡೆಸುತ್ತಿರುವ ಕ್ರೀಡಾಪಟುಗಳಿಗೆ ಅಭ್ಯಾಸ ಮುಂದುವರಿಸಲು ಅನುಮತಿ ನೀಡಲಾಗಿದೆ. ಯುವ ಜಾವಲಿನ್ ಪಟು ಸದ್ಯ ಪಟಿಯಾಲದಲ್ಲಿ ಅಭ್ಯಾಸ ನಡೆಸುತ್ತಿದ್ದು ಅವರಿಗೆ ಸಾಯ್ ಹಾಸ್ಟೆಲ್ನಲ್ಲಿರಲು ಅವಕಾಶ ನೀಡಿದೆ. ಇನ್ನಿ ಬೆಂಗಳೂರಿನ ಸಾಯ್ ಒಳಾಂಗಣ ಕ್ರೀಡಾಂಗಣದಲ್ಲಿ ಮನ್ಪ್ರೀತ್ ಸಿಂಗ್ ನೇತೃತ್ವದ ಹಾಕಿ ಟೀಂ ಇಂಡಿಯಾ ಅಭ್ಯಾಸ ನಡೆಸಲಿದೆ.
ಇದೇ ವೇಳೆ ಹಾಕಿ ಇಂಡಿಯಾ, ಎಲ್ಲಾ ರಾಷ್ಟ್ರೀಯ ಚಾಂಪಿಯನ್ಶಿಪ್ಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಿದೆ. ಕೊರೋನಾ ವೈರಸ್ನಿಂದ ದೇಶಾದ್ಯಂತ 10 ಸಾವಿರಕ್ಕೂ ಅಧಿಕ ಮಂದಿಗೆ ಸೋಂಕು ತಗುಲಿದ್ದು, 300ಕ್ಕೂ ಅಧಿಕ ಮಂದಿ ಕೊನೆಯುಸಿರೆಳೆದಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.