ಕಂಠೀರವದಲ್ಲಿ ಕ್ರೀಡಾ ವಿಜ್ಞಾನ ಕೇಂದ್ರಕ್ಕೆ ಡಿಸಿಎಂ ಚಾಲನೆ

Published : Feb 01, 2020, 10:15 AM IST
ಕಂಠೀರವದಲ್ಲಿ ಕ್ರೀಡಾ ವಿಜ್ಞಾನ ಕೇಂದ್ರಕ್ಕೆ ಡಿಸಿಎಂ ಚಾಲನೆ

ಸಾರಾಂಶ

ನಗರದ ಕಂಠೀರವ ಸ್ಟೇಡಿಯಂನಲ್ಲಿ ನೂತನ ಸುಸಜ್ಜಿತವಾದ ಕ್ರೀಡಾ ವಿಜ್ಞಾನ ಕೇಂದ್ರವನ್ನು ಉಪಮುಖ್ಯಮಂತ್ರಿ ಡಾ. ಸಿ.ಎಸ್. ಅಶ್ವತ್ಥ್ ನಾರಾಯಣ ಉದ್ಘಾಟಿಸಿದರು. ಈ ಕುರಿತಾದ ವಿವರ ಇಲ್ಲಿದೆ ನೋಡಿ...

ಬೆಂಗಳೂರು[ಫೆ.01]: ಕಂಠೀರವ ಕ್ರೀಡಾಂಗಣದಲ್ಲಿ ನೂತನವಾಗಿ ಆರಂಭವಾಗಿರುವ ಸುಸಜ್ಜಿತವಾದ ಕ್ರೀಡಾ ವಿಜ್ಞಾನ ಕೇಂದ್ರವನ್ನು ಉಪಮುಖ್ಯಮಂತ್ರಿ ಅಶ್ವತ್‌್ಥ ನಾರಾಯಣ ಶುಕ್ರವಾರ ಉದ್ಘಾಟಿಸಿದರು. 

ಸರ್ಕಾರದ ವತಿಯಿಂದ ಕ್ರೀಡಾ ಇಲಾಖೆ ಹಾಗೂ ಪೀಪಲ್‌ ಟ್ರೀ ಆಸ್ಪತ್ರೆಯ ಸಹಯೋಗದಲ್ಲಿ ದೇಶದಲ್ಲಿ ಮೊದಲ ಬಾರಿಗೆ ಕೇಂದ್ರ ಕಾರ‍್ಯರಂಭ ಮಾಡಲಿದೆ. ಇಲಾಖೆಯ 350 ಕ್ರೀಡಾಪಟುಗಳಿಗೆ ಉಚಿತ ಚಿಕಿತ್ಸೆ ನೀಡಲಾಗುತ್ತದೆ. ಉಳಿದಂತೆ ಬಡ ಅಥ್ಲೀಟ್‌ಗಳಿಗೆ ಶುಲ್ಕದಲ್ಲಿ ವಿನಾಯಿತಿ ಕಲ್ಪಿಸಲಾಗುತ್ತಿದೆ. ಅಲ್ಲದೇ ವಯೋ ವೃದ್ಧರು ಇಲ್ಲಿ ಚಿಕಿತ್ಸೆ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಆಯೋಜಕರು ಹೇಳಿದ್ದಾರೆ.

 

ವಿಜ್ಞಾನ ಕೇಂದ್ರದಲ್ಲಿ ಕ್ರೀಡಾ ಔಷಧಿ, ಶಸ್ತ್ರ ಚಿಕಿತ್ಸೆ, ಶ್ವಾಸಕೋಶ ಸಾಮರ್ಥ್ಯದ ಮೌಲ್ಯಮಾಪನ, ಫಿಸಿಯೋಥೆರಪಿ, ಸ್ಪೋರ್ಟ್ಸ್ ಬಯೋಮೆಕಾನಿಕ್ಸ್‌, ಕಿನೆಸಿಯೋಲಜಿ, 3ಡಿ ಮೂವ್‌ಮೆಂಟ್‌ ಅನಾಲಿಸಿಸ್‌, ಪುನಶ್ಚೇತನ ಶಿಬಿರ, ಕ್ರಯೋಥೆರಪಿ, ಹೈಡ್ರೋಥೆರಪಿ, ನೀರಿನಾಳದಲ್ಲಿ ತರಬೇತಿ, ಲೇಸರ್‌ ಥೆರಪಿ, ಗೆಲಿಲಿಯೋ ಫಿಟ್ನೆಸ್‌ ಟ್ರೈನಿಂಗ್‌, ನ್ಯೂಟ್ರಿಶಿಯನ್‌, ದೇಹದ ಕಂಪೋಸಿಷನ್‌ ಅನಾಲಿಸಿಸ್‌, ಸ್ಪೋರ್ಟ್ಸ್ ಸೈಕಾಲಜಿ, ಯೋಗ, ಧ್ಯಾನ ಹಾಗೂ ಗಾಯಗಳನ್ನು ತಡೆಗಟ್ಟುವ ಬಗ್ಗೆ ಮಾಹಿತಿ ನೀಡಲಾಗುತ್ತದೆ.

ಶೀಘ್ರ ಟ್ರ್ಯಾಕ್‌ ಅಳವಡಿಕೆ

ಕಂಠೀರವ ಕ್ರೀಡಾಂಗಣದಲ್ಲಿನ ಸಿಂಥೆಟಿಕ್‌ ಟ್ರ್ಯಾಕ್‌ ಟೆಂಡರ್‌ ಪ್ರಕ್ರಿಯೆ ಮುಕ್ತಾಯವಾಗಿದ್ದು ಶೀಘ್ರದಲ್ಲೇ ನಿರ್ಮಾಣ ಕಾರ‍್ಯ ಕೈಗೆತ್ತಿಕೊಳ್ಳಲಾಗುವುದು. ಹಾಗೇ ಕ್ರೀಡಾಂಗಣದಲ್ಲಿನ ಮೂಲಭೂತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಚಿಂತಿಸಲಾಗಿದೆ ಎಂದು ಅಶ್ವತ್‌್ಥ ನಾರಾಯಣ ತಿಳಿಸಿದರು.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಂಗಳೂರಿನಲ್ಲಿ ವರ್ಲ್ಡ್ ಟೆನಿಸ್ ಲೀಗ್; ಟೂರ್ನಿಯ ವೇಳಾಪಟ್ಟಿ ಪ್ರಕಟ, ಟಿಕೆಟ್ ಬುಕಿಂಗ್ ಆರಂಭ
ಸತತ ಎರಡನೇ ಬಾರಿಗೆ ಭಾರತ ಮಹಿಳೆಯರಿಗೆ ಒಲಿದ ಕಬಡ್ಡಿ ವಿಶ್ವಕಪ್ ಚಾಂಪಿಯನ್ ಪಟ್ಟ!