
ನವದೆಹಲಿ(ಸೆ.24): ಮುಂಬರುವ ಯಾವುದೇ ಅಂತಾರಾಷ್ಟ್ರೀಯ ಕ್ರೀಡಾಕೂಟಕ್ಕೆ ಆಯ್ಕೆಗೊಳ್ಳಲು ರಾಷ್ಟ್ರೀಯ ತರಬೇತಿ ಶಿಬಿರದಲ್ಲಿ ಪಾಲ್ಗೊಳ್ಳುವುದು ಕಡ್ಡಾಯ ಎಂದು ಭಾರತೀಯ ಟೇಬಲ್ ಟೆನಿಸ್(Table Tennis) ಒಕ್ಕೂಟ (ಟಿಟಿಎಫ್ಐ) ಹೊರಡಿಸಿದ್ದ ಆದೇಶವನ್ನು ದೆಹಲಿ ಹೈಕೋರ್ಟ್(Delhi High Court ) ತಡೆ ಹಿಡಿದಿದೆ. ಜತೆಗೆ ಟಿಟಿಎಫ್ಐ ವಿರುದ್ಧ ಖ್ಯಾತ ಟೇಬಲ್ ಟೆನಿಸ್ ಪಟು ಮನಿಕಾ ಬಾತ್ರಾ(Manika Batra) ಮಾಡಿರುವ ಆರೋಪದ ತನಿಖೆ ನಡೆಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.
ರಾಷ್ಟ್ರೀಯ ಶಿಬಿರದಲ್ಲಿ ಪಾಲ್ಗೊಂಡಿರಲಿಲ್ಲ ಎಂಬ ಕಾರಣಕ್ಕೆ ತಮ್ಮನ್ನು ಏಷ್ಯನ್ ಟೇಬಲ್ ಟೆನಿಸ್ ಚಾಂಪಿಯನ್ಶಿಪ್ನಿಂದ ಕೈಬಿಟ್ಟಿರುವುದನ್ನು ಪ್ರಶ್ನಿಸಿ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದರು.
ಕೋಚ್ ಸೌಮ್ಯದೀಪ್ ಫಿಕ್ಸಿಂಗ್ ಮಾಡು ಎಂದಿದ್ದರು: ಮನಿಕಾ ಬಾತ್ರಾ ಅಚ್ಚರಿಯ ಹೇಳಿಕೆ!
ಟೋಕಿಯೋ ಒಲಿಂಪಿಕ್ಸ್(Tokyo Olympics) ವೇಳೆ ರಾಷ್ಟ್ರೀಯ ಕೋಚ್ ಸೌಮ್ಯದೀಪ್ ರಾಯ್ಗೆ ಪಂದ್ಯದ ವೇಳೆ ಕೋರ್ಟ್ ಪಕ್ಕದಲ್ಲಿ ಕುಳಿತುಕೊಳ್ಳಲು ಬಿಡದೆ ಅಶಿಸ್ತು ಪ್ರದರ್ಶಿಸಿದ್ದಾರೆ ಎಂದು ಟಿಟಿಎಫ್ಐ ಈ ಮುನ್ನ, ಮನಿಕಾಗೆ ನೋಟಿಸ್ ನೀಡಿತ್ತು. ಇದಕ್ಕೆ ಪ್ರತಿಯಾಗಿ ಮನಿಕಾ, ಈ ಹಿಂದೆ ಒಲಿಂಪಿಕ್ಸ್ ಅರ್ಹತಾ ಸುತ್ತಿನ ವೇಳೆ ಸೌಮ್ಯದೀಪ್ ತನಗೆ ಪಂದ್ಯ ಕೈಚೆಲ್ಲುವಂತೆ ಹೇಳಿದ್ದರು. ತಮ್ಮ ಅಕಾಡೆಮಿಯ ವಿದ್ಯಾರ್ಥಿನಿ ಒಲಿಂಪಿಕ್ಸ್ಗೆ ಅರ್ಹತೆ ಗಳಿಸಲು ಈ ಫಿಕ್ಸಿಂಗ್ ಆಮಿಷ ಒಡ್ಡಿದ್ದರು ಮನಿಕಾ ಆರೋಪಿಸಿದ್ದರು.
ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠವು, ರಾಷ್ಟ್ರೀಯ ಕೋಚ್ ವಿರುದ್ಧ ಬಾತ್ರಾ ಮಾಡಿರುವ ಆರೋಪದ ಕುರಿತು ತನಿಖೆ ನಡೆಸಿ, 4 ವಾರದೊಳಗೆ ವರದಿ ಸಲ್ಲಿಸುವಂತೆ ಸೂಚಿಸಿತು. ಜತೆಗೆ ರಾಷ್ಟ್ರೀಯ ಶಿಬಿರದಲ್ಲಿ ಪಾಲ್ಗೊಳ್ಳುವಿಕೆ ಕಡ್ಡಾಯ ಎಂಬ ಆದೇಶಕ್ಕೂ ತಡೆಯಾಜ್ಞೆ ನೀಡಿತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.