
ನವದೆಹಲಿ(ನ.30): ಮಾಜಿ ರಾಷ್ಟ್ರೀಯ ಚಾಂಪಿಯನ್ ಬಾಕ್ಸರ್ ದುರ್ಯೋಧನ್ ಸಿಂಗ್ ನೇಗಿ ಕೊರೋನಾ ಸೋಂಕು ದೃಢಪಟ್ಟಿದೆ. ಮುನ್ನೆಚ್ಚರಿಕಾ ಕ್ರಮವಾಗಿ ದುರ್ಯೋಧನ್ರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಭಾರತೀಯ ಕ್ರೀಡಾ ಪ್ರಾಧಿಕಾರ (ಸಾಯ್) ಭಾನುವಾರ ಹೇಳಿದೆ.
ಪಟಿಯಾಲದ ಸಾಯ್ ಕೇಂದ್ರದಲ್ಲಿ ರಾಷ್ಟ್ರೀಯ ಶಿಬಿರದಲ್ಲಿ ಭಾಗವಹಿಸಿದ್ದ ದುರ್ಯೋಧನ್, ದೀಪಾವಳಿಗಾಗಿ ಬಿಡುವು ಪಡೆದಿದ್ದರು. ಈ ವೇಳೆ ಕೊರೋನಾ ತಗುಲಿದೆ ಎನ್ನಲಾಗಿದೆ.
ಪ್ರೊ ಕಬಡ್ಡಿ ಮುಂದಿನ ವರ್ಷಕ್ಕೆ ಮುಂದೂಡಿಕೆ..!
ನರಸಿಂಗ್ಗೆ ಕೊರೋನಾ ಸೋಂಕು:
ಭಾರತದ ತಾರಾ ಕುಸ್ತಿಪಟು ನರಸಿಂಗ್ ಯಾದವ್ ಹಾಗೂ ಗ್ರೀಕೋ ರೋಮನ್ ವಿಭಾಗದ ಕುಸ್ತಿಪಟು ಗುರುಪ್ರೀತ್ ಸಿಂಗ್ಗೆ ಕೊರೋನಾ ಸೋಂಕು ದೃಢಪಟ್ಟಿದೆ. ಕುಸ್ತಿ ತಂಡದ ಫಿಸಿಯೊ ವಿನೋದ್ ರೈಗೆ ಕೂಡಾ ಸೋಂಕಿರುವುದು ಪತ್ತೆಯಾಗಿದೆ. ಮೂವರನ್ನು ಸೋನೆಪತ್ನ ಭಾಗವಾನ್ ಮಹಾವೀರ್ ದಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ ಎಂದು ಸಾಯ್ ಹೇಳಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.