
ಹಾಂಕಾಂಗ್(ನ.17): ಭಾರತದ ತಾರಾ ಶಟ್ಲರ್ ಕಿದಂಬಿ ಶ್ರೀಕಾಂತ್, ಇಲ್ಲಿ ನಡೆಯುತ್ತಿರುವ ಹಾಂಕಾಂಗ್ ಓಪನ್ ಬ್ಯಾಡ್ಮಿಂಟನ್ ಟೂರ್ನಿಯ ಪುರುಷರ ಸಿಂಗಲ್ಸ್ ಸೆಮಿಫೈನಲ್ನಲ್ಲಿ ಸೋಲುಂಡು ಹೊರಬಿದ್ದಿದ್ದಾರೆ. ಇದರೊಂದಿಗೆ ಭಾರತದ ಸವಾಲು ಅಂತ್ಯವಾಗಿದೆ.
ಹಾಂಕಾಂಗ್ ಓಪನ್: ಸೆಮಿಫೈನಲ್ಗೆ ಲಗ್ಗೆ ಇಟ್ಟ ಶ್ರೀಕಾಂತ್!
ಶನಿವಾರ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಶ್ರೀಕಾಂತ್, ಸ್ಥಳೀಯ ಆಟಗಾರ ಲೀ ಚೆಯುಕ್ ಯೀ ವಿರುದ್ಧ 9-21, 23-25 ಗೇಮ್ಗಳಲ್ಲಿ ಪರಾಭವಗೊಂಡರು. ಪಂದ್ಯದ ಮೊದಲ ಸುತ್ತು ಹಾಗೂ ಕ್ವಾರ್ಟರ್ಫೈನಲ್ನಲ್ಲಿ ಅದೃಷ್ಟದ ಜಯ ದಾಖಲಿಸಿದ್ದ ಶ್ರೀಕಾಂತ್ಗೆ ಸೆಮೀಸ್ನಲ್ಲಿ ಕಠಿಣ ಸವಾಲು ಎದುರಾಗಿತ್ತು.
ಈ ವರ್ಷದ ಇಂಡಿಯಾ ಓಪನ್ ಟೂರ್ನಿಯಲ್ಲಿ ರನ್ನರ್ ಅಪ್ ಆಗಿದ್ದ ಮಾಜಿ ವಿಶ್ವ ನಂ.1 ಶ್ರೀಕಾಂತ್, ಮಾರ್ಚ್ ಬಳಿಕ ಮೊದಲ ಬಾರಿ ಟೂರ್ನಿಯೊಂದರಲ್ಲಿ ಸೆಮೀಸ್ಗೇರಿದ್ದರು. ಈ ಟೂರ್ನಿಯ ಮೊದಲ ಸುತ್ತಲ್ಲಿ ವಿಶ್ವ ಚಾಂಪಿಯನ್ ಕೆಂಟೋ ಮೊಮೊಟಾ ಹಿಂದೆ ಸರಿದ ಕಾರಣ ಬೈ ಪಡೆದು 2ನೇ ಸುತ್ತಿಗೇರಿದ್ದರು. ಕ್ವಾರ್ಟರ್ಫೈನಲ್ನಲ್ಲಿ ಚೀನಾದ ಚೆನ್ ಲಾಂಗ್ ಗಾಯಗೊಂಡು ಪಂದ್ಯ ಬಿಟ್ಟುಕೊಟ್ಟಿದ್ದಕ್ಕೆ ಸೆಮಿಫೈನಲ್ಗೇರಿದ್ದರು.
ಸೆಮೀಸ್ನಲ್ಲಿ ಶ್ರೀಕಾಂತ್ಗೆ ಪ್ರಬಲ ಪೈಪೋಟಿ ಎದುರಾಯಿತು. ಮೊದಲ ಗೇಮ್ನಲ್ಲೇ ಭಾರತೀಯ ಆಟಗಾರ ಸುಸ್ತಾದರು. 2ನೇ ಗೇಮ್ನಲ್ಲಿ ಶ್ರೀಕಾಂತ್ ಹೋರಾಟ ನಡೆಸಿದರೂ, ಯಾವುದೇ ಪ್ರಯೋಜನವಾಗಲಿಲ್ಲ. 42 ನಿಮಿಷಗಳಲ್ಲಿ ಪಂದ್ಯ ಮುಕ್ತಾಯಗೊಂಡಿತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.