
ಹಾಂಕಾಂಗ್[ನ.15]: ಭಾರತದ ತಾರಾ ಶಟ್ಲರ್ ಕಿದಂಬಿ ಶ್ರೀಕಾಂತ್ ಲಯಕ್ಕೆ ಮರಳಿದ್ದಾರೆ. ಇಲ್ಲಿ ನಡೆಯುತ್ತಿರುವ ಹಾಂಕಾಂಗ್ ಓಪನ್ ಬ್ಯಾಡ್ಮಿಂಟನ್ ಟೂರ್ನಿಯ ಪುರುಷರ ಸಿಂಗಲ್ಸ್ನಲ್ಲಿ ಶ್ರೀಕಾಂತ್ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ. ಕಳೆದ 7 ತಿಂಗಳಲ್ಲಿ ಶ್ರೀಕಾಂತ್ ಮೊದಲ ಬಾರಿ ಟೂರ್ನಿಯೊಂದರಲ್ಲಿ ಕ್ವಾರ್ಟರ್ಗೇರಿದ್ದಾರೆ.
ಗುರುವಾರ ನಡೆದ 2ನೇ ಸುತ್ತಿನ ಪಂದ್ಯದಲ್ಲಿ ಮಾಜಿ ವಿಶ್ವ ನಂ.1 ಶ್ರೀಕಾಂತ್, ಭಾರತದವರೇ ಆದ ಸೌರಭ್ ವರ್ಮಾ ವಿರುದ್ಧ 21-11, 15-21, 21-19 ಗೇಮ್ಗಳಲ್ಲಿ ಗೆಲುವು ಸಾಧಿಸಿದರು. ಮುಂದಿನ ಸುತ್ತಿನಲ್ಲಿ ಶ್ರೀಕಾಂತ್, ಒಲಿಂಪಿಕ್ ಚಾಂಪಿಯನ್ ಚೀನಾದ ಚೆನ್ ಲಾಂಗ್ರನ್ನು ಎದುರಿಸಲಿದ್ದಾರೆ. ಸದ್ಯ ಟೂರ್ನಿಯಲ್ಲಿ ಉಳಿದಿರುವ ಭಾರತದ ಏಕೈಕ ಶಟ್ಲರ್ ಶ್ರೀಕಾಂತ್ ಆಗಿದ್ದಾರೆ.
ಹಾಂಕಾಂಗ್ ಓಪನ್ ಬ್ಯಾಡ್ಮಿಂಟನ್: ಮೊದಲ ಸುತ್ತಲ್ಲೇ ಸೈನಾ ಔಟ್!
ಮತ್ತೊಂದು 2ನೇ ಸುತ್ತಿನ ಪಂದ್ಯದಲ್ಲಿ ಎಚ್.ಎಸ್. ಪ್ರಣಯ್, 6ನೇ ಶ್ರೇಯಾಂಕಿತ ಇಂಡೋನೇಷ್ಯಾದ ಜೋನಾಥನ್ ಕ್ರಿಸ್ಟಿವಿರುದ್ಧ 12-21, 19-21 ಗೇಮ್ಗಳಲ್ಲಿ ಪರಾಭವಗೊಂಡರು. ಅನುಭವಿ ಶಟ್ಲರ್ ಪಿ. ಕಶ್ಯಪ್, ಚೈನೀಸ್ ತೈಪೆಯ ಟೀನ್ ಚೆನ್ ಚೌ ವಿರುದ್ಧ 21-12, 21-23, 10-21 ಗೇಮ್ಗಳಲ್ಲಿ ಸೋಲು ಅನುಭವಿಸಿ ಹೊರಬಿದ್ದರು.
ಸಿಂಧುಗೆ ನಿರಾಸೆ: ಮಹಿಳಾ ಸಿಂಗಲ್ಸ್ನ 2ನೇ ಸುತ್ತಿನಲ್ಲಿ ವಿಶ್ವ ಚಾಂಪಿಯನ್ ಪಿ.ವಿ. ಸಿಂಧು, ಥಾಯ್ಲೆಂಡ್ನ ಬುಸಾನನ್ ವಿರುದ್ಧ 18-21, 21-11, 16-21 ಗೇಮ್ಗಳಲ್ಲಿ ಸೋಲು ಕಂಡರು. ಇದರೊಂದಿಗೆ ಮಹಿಳಾ ಸಿಂಗಲ್ಸ್ನಲ್ಲಿ ಭಾರತದ ಸವಾಲು ಅಂತ್ಯವಾಗಿದೆ. ಸೈನಾ ನೆಹ್ವಾಲ್ ಮೊದಲ ಸುತ್ತಲ್ಲೇ ಹೊರಬಿದ್ದಿದ್ದರು.
ಮಿಶ್ರ ಡಬಲ್ಸ್ನಲ್ಲಿ ಭಾರತದ ಸಾತ್ವಿಕ್ ಹಾಗೂ ಅಶ್ವಿನಿ ಪೊನ್ನಪ್ಪ ಜೋಡಿ, ಜಪಾನ್ನ ವಟ್ನಾಬೆ, ಹಿಗಾಶಿನೊ ಜೋಡಿ ವಿರುದ್ಧ 19-21, 12-21 ಗೇಮ್ಗಳಲ್ಲಿ ಸೋಲುವ ಮೂಲಕ ಟೂರ್ನಿಯಿಂದ ಹೊರಬಿತ್ತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.