ಇಂದಿನಿಂದ ಬ್ಯಾಡ್ಮಿಂಟನ್‌ ವಿಶ್ವ ಟೂರ್‌ ಫೈನಲ್ಸ್‌

Kannadaprabha News   | Asianet News
Published : Jan 27, 2021, 07:54 AM IST
ಇಂದಿನಿಂದ ಬ್ಯಾಡ್ಮಿಂಟನ್‌ ವಿಶ್ವ ಟೂರ್‌ ಫೈನಲ್ಸ್‌

ಸಾರಾಂಶ

ಬ್ಯಾಡ್ಮಿಂಟನ್‌ ವಿಶ್ವ ಟೂರ್‌ ಫೈನಲ್ಸ್‌ ಟೂರ್ನಿಯಲ್ಲಿ ಭಾರತವನ್ನು ಪ್ರತಿನಿಧಿಸಲು ಕಿದಂಬಿ ಶ್ರೀಕಾಂತ್ ಹಾಗೂ ಪಿ.ವಿ. ಸಿಂಧು ಅರ್ಹತೆಗಿಟ್ಟಿಸಿಕೊಂಡಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

ಬ್ಯಾಂಕಾಕ್(ಜ.27)‌: ಭಾರತದ ತಾರಾ ಶಟ್ಲರ್‌ಗಳಾದ ಪಿ.ವಿ.ಸಿಂಧು ಹಾಗೂ ಕಿದಂಬಿ ಶ್ರೀಕಾಂತ್‌ ಬುಧವಾರದಿಂದ ಇಲ್ಲಿ ಆರಂಭಗೊಳ್ಳಲಿರುವ ಬ್ಯಾಡ್ಮಿಂಟನ್‌ ವಿಶ್ವ ಟೂರ್‌ ಫೈನಲ್ಸ್‌ ಟೂರ್ನಿಯಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ.

ವಿಶ್ವದ ಅಗ್ರ 8 ಆಟಗಾರರು ಮಾತ್ರ ಈ ಟೂರ್ನಿಯಲ್ಲಿ ಸ್ಪರ್ಧಿಸಲಿದ್ದು, ಚೀನಾ ಹಾಗೂ ಜಪಾನ್‌ ಆಟಗಾರರು ಹೊರಗುಳಿಯಲು ನಿರ್ಧರಿಸಿದ ಕಾರಣ ಸಾಧಾರಣ ಪ್ರದರ್ಶನದ ಹೊರತಾಗಿಯೂ ಈ ಇಬ್ಬರಿಗೆ ಅರ್ಹತೆ ದೊರೆತಿದೆ. ಟೂರ್ನಿ ಕಳೆದ ವರ್ಷ ಡಿಸೆಂಬರ್‌ನಲ್ಲೇ ಚೀನಾದಲ್ಲಿ ನಡೆಯಬೇಕಿತ್ತು. ಕೋವಿಡ್‌ನಿಂದಾಗಿ ಮುಂದೂಡಲಾಗಿತ್ತು.

ಥಾಯ್ಲೆಂಡ್‌ ಓಪನ್‌: ಸಿಂಧು, ಸಮೀರ್‌ಗೆ ಸೋಲು; ಸಾತ್ವಿಕ್‌ಗೆ ಡಬಲ್‌ ಯಶಸ್ಸು

ಮಂಗಳವಾರ ಟೂರ್ನಿಯ ಡ್ರಾ ನಡೆಸಲಾಯಿತು. ಪುರುಷರ ಸಿಂಗಲ್ಸ್‌ನ ‘ಎ’ ಗುಂಪಿನಲ್ಲಿ ಶ್ರೀಕಾಂತ್‌ ಸ್ಥಾನ ಪಡೆದರೆ, ಮಹಿಳಾ ಸಿಂಗಲ್ಸ್‌ ವಿಭಾಗದಲ್ಲಿ ಸಿಂಧುಗೆ ‘ಬಿ’ ಗುಂಪಿನಲ್ಲಿ ಸ್ಥಾನ ಲಭಿಸಿದೆ. ಲೀಗ್‌ ಹಂತದಲ್ಲಿ ಒಟ್ಟು 3 ಪಂದ್ಯಗಳು ನಡೆಯಲಿದ್ದು, ಅಗ್ರ 2 ಸ್ಥಾನ ಪಡೆಯುವ ಆಟಗಾರರು ಸೆಮಿಫೈನಲ್‌ ಪ್ರವೇಶಿಸಲಿದ್ದಾರೆ.

ಇತ್ತೀಚೆಗಷ್ಟೇ ಮುಕ್ತಾಯವಾದ ಥಾಯ್ಲೆಂಡ್ ಓಪನ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಕಿದಂಬಿ ಶ್ರೀಕಾಂತ್ ಆರಂಭದಲ್ಲೇ ಮುಗ್ಗರಿಸಿದರೆ, ಒಲಿಂಪಿಕ್ಸ್‌ ಬೆಳ್ಳಿ ಪದಕ ವಿಜೇತೆ ಪಿ.ವಿ ಸಿಂಧು ಕ್ವಾರ್ಟರ್‌ ಫೈನಲ್‌ನಲ್ಲಿ ಸೋಲುಂಡು ಟೂರ್ನಿಯಿಂದ ಹೊರಬಿದ್ದಿದ್ದರು.


 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಂಗಳೂರಿನಲ್ಲಿ ವರ್ಲ್ಡ್ ಟೆನಿಸ್ ಲೀಗ್; ಟೂರ್ನಿಯ ವೇಳಾಪಟ್ಟಿ ಪ್ರಕಟ, ಟಿಕೆಟ್ ಬುಕಿಂಗ್ ಆರಂಭ
ಸತತ ಎರಡನೇ ಬಾರಿಗೆ ಭಾರತ ಮಹಿಳೆಯರಿಗೆ ಒಲಿದ ಕಬಡ್ಡಿ ವಿಶ್ವಕಪ್ ಚಾಂಪಿಯನ್ ಪಟ್ಟ!