ಕೊರೋನಾ ಬಳಿಕ ಸಿಂಧು, ಸೈನಾ ದೇಶದ ಪರ ಒಟ್ಟಿಗೆ ಸ್ಪರ್ಧಾ ಕಣಕ್ಕೆ

Suvarna News   | Asianet News
Published : Dec 22, 2020, 09:10 AM IST
ಕೊರೋನಾ ಬಳಿಕ ಸಿಂಧು, ಸೈನಾ ದೇಶದ ಪರ ಒಟ್ಟಿಗೆ ಸ್ಪರ್ಧಾ ಕಣಕ್ಕೆ

ಸಾರಾಂಶ

ಕೊರೋನಾ ಹೆಮ್ಮಾರಿಯ ಅಟ್ಟಹಾಸದ ಬಳಿಕ ಭಾರತದ ತಾರಾ ಬ್ಯಾಡ್ಮಿಂಟನ್ ಪಟುಗಳು ಅಬ್ಬರಿಸಲು ರೆಡಿಯಾಗಿದ್ದಾರೆ. ಸೈನಾ ನೆಹ್ವಾಲ್ ಹಾಗೂ ಪಿ.ವಿ. ಸಿಂಧು ಒಂದೇ ಟೂರ್ನಿಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

ನವದೆಹಲಿ(ಡಿ.22): 2021ರ ಜನವರಿಯಲ್ಲಿ ನಡೆಯಲಿರುವ ಬಿಡಬ್ಲ್ಯೂಎಫ್‌ ವಿಶ್ವ ಟೂರ್‌ ಫೈನಲ್ಸ್‌ ಸೇರಿದಂತೆ 3 ಬ್ಯಾಡ್ಮಿಂಟನ್‌ ಟೂರ್ನಿಗಳಿಗೆ ತಾರಾ ಶಟ್ಲರ್‌ಗಳಾದ ಪಿ.ವಿ. ಸಿಂಧು ಹಾಗೂ ಸೈನಾ ನೆಹ್ವಾಲ್‌ ಸೇರಿದಂತೆ 8 ಶಟ್ಲರ್‌ಗಳು ಭಾರತ ತಂಡದಲ್ಲಿ ಆಡಲಿದ್ದಾರೆ. 

ಕೊರೋನಾ ಬಳಿಕ ಸಿಂಧು ಹಾಗೂ ಸೈನಾ ಮೊದಲ ಬಾರಿಗೆ ಒಟ್ಟಿಗೆ ಭಾರತ ತಂಡದ ಸ್ಪರ್ಧಾ ಕಣದಲ್ಲಿದ್ದಾರೆ. ಬ್ಯಾಂಕಾಕ್‌ನಲ್ಲಿ ಈ 3 ಟೂರ್ನಿಗಳು ನಡೆಯಲಿವೆ. ಜನವರಿ 12 ರಿಂದ 17 ರವರೆಗೆ ಯೋನೆಕ್ಸ್‌ ಥಾಯ್ಲೆಂಡ್‌ ಓಪನ್‌, ಜನವರಿ 19 ರಿಂದ 24 ರವರೆಗೆ ಟೋಯೋಟಾ ಥಾಯ್ಲೆಂಡ್‌ ಓಪನ್‌ ಮತ್ತು ಜನವರಿ 27 ರಿಂದ 31 ರವರೆಗೆ ಬಿಡಬ್ಲ್ಯೂಎಫ್‌ ವಿಶ್ವ ಟೂರ್‌ ಫೈನಲ್ಸ್‌ ಟೂರ್ನಿಗಳು ನಡೆಯಲಿವೆ. 

ಭಾರತ ಪರ ಸಿಂಧು, ಸೈನಾ, ಸಾಯಿ ಪ್ರಣೀತ್‌, ಕೆ. ಶ್ರೀಕಾಂತ್‌, ಸಾತ್ವಿಕ್‌ಸಾಯಿರಾಜ್‌, ಚಿರಾಗ್‌ ಶೆಟ್ಟಿ, ಅಶ್ವಿನಿ ಪೊನ್ನಪ್ಪ ಮತ್ತು ಎನ್‌. ಸಿಕ್ಕಿ ರೆಡ್ಡಿ ಸ್ಪರ್ಧಾ ಕಣದಲ್ಲಿದ್ದಾರೆ.

ಪಿ ವಿ ಸಿಂಧು ಜತೆ ತೆರಳಲು ಫಿಟ್ನೆಸ್‌ ಕೋಚ್‌ಗೆ ಅಸ್ತು...!

ಕೊರೋನಾ ವೈರಸ್‌ ಹೆಮ್ಮಾರಿಯ ಅಟ್ಟಹಾಸದ ಬಳಿಕ ಇದೇ ಮೊದಲ ಬಾರಿಗೆ ಪಿ.ವಿ. ಸಿಂಧು ಹಾಗೂ ಸೈನಾ ನೆಹ್ವಾಲ್ ಸ್ಫರ್ಧಾತ್ಮಕ ಕ್ರೀಡೆಗೆ ಮರಳಲು ಸಜ್ಜಾಗುತ್ತಿದ್ದಾರೆ. ಇನ್ನು ಮಾಜಿ ನಂ.1 ಶ್ರೇಯಾಂಕಿತ ಆಟಗಾರ ಕಿದಂಬಿ ಶ್ರೀಕಾಂತ್ ಕಳೆದ ಅಕ್ಟೋಬರ್‌ನಲ್ಲಿ ಡೆನ್ಮಾರ್ಕ್ ಓಪನ್ ಟೂರ್ನಿಯಲ್ಲಿ ಪಾಲ್ಗೊಂಡಿದ್ದರು. ಇದೀಗ ಹೊಸ ವರ್ಷವನ್ನು ಭರ್ಜರಿಯಾಗಿಯೇ ಆರಂಭಿಸಲು ಭಾರತೀಯ ಬ್ಯಾಡ್ಮಿಂಟನ್ ಪಟುಗಳು ಎದುರು ನೋಡುತ್ತಿದ್ದಾರೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಂಗಳೂರಿನಲ್ಲಿ ವರ್ಲ್ಡ್ ಟೆನಿಸ್ ಲೀಗ್; ಟೂರ್ನಿಯ ವೇಳಾಪಟ್ಟಿ ಪ್ರಕಟ, ಟಿಕೆಟ್ ಬುಕಿಂಗ್ ಆರಂಭ
ಸತತ ಎರಡನೇ ಬಾರಿಗೆ ಭಾರತ ಮಹಿಳೆಯರಿಗೆ ಒಲಿದ ಕಬಡ್ಡಿ ವಿಶ್ವಕಪ್ ಚಾಂಪಿಯನ್ ಪಟ್ಟ!