ಭಾರತದಲ್ಲಿ ಏ.15ರ ವರೆಗೂ ಯಾವುದೇ ಟೂರ್ನಿಗೆ ಅವಕಾಶವಿಲ್ಲ; ಕೇಂದ್ರ ಸರ್ಕಾರ!

Published : Mar 20, 2020, 04:35 PM IST
ಭಾರತದಲ್ಲಿ ಏ.15ರ ವರೆಗೂ ಯಾವುದೇ ಟೂರ್ನಿಗೆ ಅವಕಾಶವಿಲ್ಲ; ಕೇಂದ್ರ ಸರ್ಕಾರ!

ಸಾರಾಂಶ

ಕೊರೋನಾ ವೈರಸ್ ತಡೆಗೆ ಹಲವು ಕ್ರಮಗಳು ಕೈಗೊಳ್ಳುತ್ತಿದ್ದರೂ ಸೋಂಕು ಹತೋಟಿಗೆ ಬಂದಿಲ್ಲ. ಹೀಗಾಗಿ ಎಲ್ಲಾ ಕ್ರೀಡಾಕೂಟಗಳು, ಟೂರ್ನಿಗಳನ್ನು ರದ್ದುಮಾಡಲು ಕೇಂದ್ರ ಕ್ರೀಡಾ ಸಚಿವಾಲಯ ಕಟ್ಟು ನಿಟ್ಟಿನ ಆದೇಶ ನೀಡಿದೆ.   

ನವದೆಹಲಿ(ಮಾ.20): ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಏಪ್ರಿಲ್‌ 15ರ ವರೆಗೂ ಯಾವುದೇ ಪಂದ್ಯಾವಳಿ ಹಾಗೂ ಆಯ್ಕೆ ಟ್ರಯಲ್ಸ್‌ಗಳನ್ನು ನಡೆಸದಂತೆ ಕೇಂದ್ರ ಕ್ರೀಡಾ ಸಚಿವಾಲಯ ರಾಷ್ಟ್ರೀಯ ಫೆಡರೇಷನ್‌ಗಳಿಗೆ ಸೂಚನೆ ನೀಡಿದೆ. ಶುಕ್ರವಾರದಿಂದ ಆರಂಭಗೊಳ್ಳಬೇಕಿರುವ ಇಂಡಿಯನ್‌ ಗ್ರ್ಯಾನ್‌ ಪ್ರಿ ಅಥ್ಲೆಟಿಕ್ಸ್‌ ಕೂಟ ಸಹ ನಡೆಯುವುದು ಅನುಮಾನವೆನಿಸಿದೆ. 

IPL 2020ಗೆ ತಯಾರಿ ನಡೆಸುತ್ತಿರುವ ಬಿಸಿಸಿಐಗೆ ಶಾಕ್ ನೀಡಿದ ಕೇಂದ್ರ ಕ್ರೀಡಾ ಸಚಿವ ರಿಜಿಜು!

ಜತೆಗೆ ಒಲಿಂಪಿಕ್ಸ್‌ ಶಿಬಿರಗಳಿಗೆ ಯಾವುದೇ ಕ್ರೀಡಾಪಟುವನ್ನು ಬಿಡುವ ಮುನ್ನ ಸಂಪೂರ್ಣವಾಗಿ ತಪಾಸಣೆ ನಡೆಸುವಂತೆ ಸೂಚಿಸಲಾಗಿದೆ. ವಿದೇಶದಲ್ಲಿ ಅಭ್ಯಾಸ ನಡೆಸುತ್ತಿದ್ದ ಕ್ರೀಡಾಪಟುಗಳು ಭಾರತಕ್ಕೆ ವಾಪಸಾಗಿದ್ದು, ಅವರನ್ನು ಕಡ್ಡಾಯವಾಗಿ ತಪಾಸಣೆಗೆ ಒಳಪಡಿಸಬೇಕು ಹಾಗೂ 2 ವಾರಗಳ ಕಾಲ ಸ್ವಯಂ ದಿಗ್ಬಂಧನದಲ್ಲಿ ಇರುವಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಆಸ್ಟ್ರೇಲಿಯಾದಿಂದ ತವರಿಗೆ ವಾಪಸ್ ಆದ ನ್ಯೂಜಿಲೆಂಡ್ ಕ್ರಿಕೆಟಿಗರಿಗೆ ದಿಗ್ಬಂಧನ!

ಭಾರತದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಮುಂಜಾಗ್ರತ ಕ್ರಮಗಳನ್ನು ಕೈಗೊಂಡರು ಸೋಂಕು ಹತೋಟಿಗೆ ಬರುತ್ತಿಲ್ಲ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಜನತಾ ಕರ್ಫ್ಯೂಗೆ ಮನವಿ ಮಾಡಿದ್ದಾರೆ. ಅಗತ್ಯವಿದ್ದಲ್ಲಿ ಮಾತ್ರ ಮನಯಿಂದ ಹೊರಬರಲು ಮನವಿ ಮಾಡಿದ್ದಾರೆ. 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಹಾಲಿ ಚಾಂಪಿಯನ್‌ ಕಾರ್ಲೋಸ್‌ ಆಲ್ಕರಜ್‌, ಅರೈನಾ ಸಬಲೆಂಕಾ ಅಬ್ಬರ; US Open 3ನೇ ಸುತ್ತಿಗೆ ಲಗ್ಗೆ
ದೇಶಕ್ಕಾಗಿ 4 ಚಿನ್ನದ ಪದಕ ಗೆದ್ದ ಕ್ರೀಡಾಪಟುವಿನ ಕಣ್ಣೀರ ಕಥೆ: ಕುಟುಂಬ ಸಾಕಲು ಹಗಲಲ್ಲಿ ಕ್ಯಾಬ್ ಚಾಲನೆ, ಸಂಜೆ ತರಕಾರಿ ವ್ಯಾಪಾರ!