ಇಂಡೋನೇಷ್ಯಾ ಮಾಸ್ಟರ್ಸ್‌: ಸಿಂಧು ಸೋಲಿನೊಂದಿಗೆ ಭಾರತದ ಸವಾಲು ಅಂತ್ಯ

Kannadaprabha News   | Asianet News
Published : Jan 17, 2020, 11:51 AM IST
ಇಂಡೋನೇಷ್ಯಾ ಮಾಸ್ಟರ್ಸ್‌: ಸಿಂಧು ಸೋಲಿನೊಂದಿಗೆ ಭಾರತದ ಸವಾಲು ಅಂತ್ಯ

ಸಾರಾಂಶ

ಇಂಡೋನೇಷ್ಯಾ ಮಾಸ್ಟರ್ಸ್‌ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಪಿ.ವಿ. ಸಿಂಧು ಸೋಲಿನೊಂದಿಗೆ ಭಾರತದ ಹೋರಾಟ ಅಂತ್ಯವಾಗಿದೆ. ಈ ಕುರಿತಾದ ವಿವರ ಇಲ್ಲಿದೆ ನೋಡಿ..

ಜಕಾರ್ತ(ಜ.17): ಭಾರತದ ತಾರಾ ಶಟ್ಲರ್‌ ಪಿ.ವಿ. ಸಿಂಧು, ಇಲ್ಲಿ ನಡೆಯುತ್ತಿರುವ ಇಂಡೋನೇಷ್ಯಾ ಮಾಸ್ಟರ್ಸ್‌ ಸೂಪರ್‌ 500 ಬ್ಯಾಡ್ಮಿಂಟನ್‌ ಟೂರ್ನಿಯಲ್ಲಿ ಸೋಲುಂಡು ಹೊರಬಿದ್ದಿದ್ದಾರೆ. ಸಿಂಧು ಸೋಲಿನೊಂದಿಗೆ ಭಾರತದ ಸವಾಲು ಅಂತ್ಯವಾಗಿದೆ.

ಇಂಡೋನೇಷ್ಯಾ ಮಾಸ್ಟರ್ಸ್: ಮುನ್ನಡೆದ ಸಿಂಧು, ಸೈನಾ ಔಟ್‌

2020ರ ಈ ಋುತುವಿನ 2ನೇ ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್‌ ಟೂರ್ನಿಯಲ್ಲಿ ಭಾರತೀಯ ಶಟ್ಲರ್‌ಗಳ ಸವಾಲು ಪ್ರಿಕ್ವಾರ್ಟರ್‌ ಹಂತಕ್ಕೆ ಮುಕ್ತಾಯವಾಗಿದೆ. ಸೈನಾ ನೆಹ್ವಾಲ್ ಮೊದಲ ಸುತ್ತಿನಲ್ಲೇ ಆಘಾತಕಾರಿ ಸೋಲು ಕಂಡು ಟೂರ್ನಿಯಿಂದ ಹೊರಬಿದ್ದಿದ್ದರು.

ಗುರುವಾರ ನಡೆದ ಮಹಿಳಾ ಸಿಂಗಲ್ಸ್‌ನ 2ನೇ ಸುತ್ತಿನಲ್ಲಿ ಸಿಂಧು, ಜಪಾನ್‌ನ ಸಯಾಕ ತಕಹಾಶಿ ವಿರುದ್ಧ 21-16, 16-21, 19-21 ಗೇಮ್‌ಗಳಲ್ಲಿ ಪರಾಭವಗೊಂಡರು. ಸಿಂಧು ವಿರುದ್ಧ ತಕಹಾಶಿಗೆ ಇದು 3ನೇ ಗೆಲುವಾಗಿದೆ.

 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಂಗಳೂರಿನಲ್ಲಿ ವರ್ಲ್ಡ್ ಟೆನಿಸ್ ಲೀಗ್; ಟೂರ್ನಿಯ ವೇಳಾಪಟ್ಟಿ ಪ್ರಕಟ, ಟಿಕೆಟ್ ಬುಕಿಂಗ್ ಆರಂಭ
ಸತತ ಎರಡನೇ ಬಾರಿಗೆ ಭಾರತ ಮಹಿಳೆಯರಿಗೆ ಒಲಿದ ಕಬಡ್ಡಿ ವಿಶ್ವಕಪ್ ಚಾಂಪಿಯನ್ ಪಟ್ಟ!