
ರಾಮನಗರ(ಜ.21): ಕರ್ನಾಟಕ ರಾಜ್ಯ ಅಥ್ಲೆಟಿಕ್ಸ್ ಸಂಸ್ಥೆ (ಕೆಎಎ) ಅಧ್ಯಕ್ಷ ಸ್ಥಾನಕ್ಕೆ ಶೀಘ್ರ ರಾಜೀನಾಮೆ ನೀಡಲಿದ್ದೇನೆ ಎಂದು ಮುತ್ತಪ್ಪ ರೈ ಸೋಮವಾರ ಹೇಳಿದ್ದಾರೆ.
ಅನಾರೋಗ್ಯದ ಕಾರಣ ಈ ನಿರ್ಧಾರಕ್ಕೆ ಬಂದಿದ್ದು, ಮುಂದಿನ ಅವಧಿಯಲ್ಲಿ ಈ ಹುದ್ದೆಯನ್ನು ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ್ ಅವರು ನಿರ್ವಹಿಸಲಿದ್ದಾರೆ ಎಂದಿದ್ದಾರೆ.
ನನ್ನ ಜೊತೆ ಕೆಲಸ ಮಾಡೋರಿಗೆ ಸೈಟ್ ಕೊಡ್ತೇನೆ :ಮುತ್ತಪ್ಪ ರೈ
‘ಈ ಹಿಂದೆ ರಾಮನಗರ ಜಿಲ್ಲಾ ಅಥ್ಲೆಟಿಕ್ಸ್ ಸಂಸ್ಥೆಗೆ ಅಧ್ಯಕ್ಷರಾಗಿದ್ದಾಗ ಹಲವು ಬಾರಿ ಅಥ್ಲೆಟಿಕ್ಸ್ ಕೂಟಗಳನ್ನು ಆಯೋಜಿಸಿದ್ದೇನೆ. ಆ ವೇಳೆ ಕೆಲವರು ಕೆಎಎ ಅಧ್ಯಕ್ಷರಾಗುವಂತೆ ಒತ್ತಡ ಹಾಕಿದ್ದರು. ಹೀಗಾಗಿ ಅಧ್ಯಕ್ಷನಾಗಿ ಕಾರ್ಯನಿರ್ವಹಿಸಿದೆ’ ಎಂದು ಅವರು ಹೇಳಿಕೊಂಡಿದ್ದಾರೆ.
2018 ರ ಸೆಪ್ಟೆಂಬರ್ನಲ್ಲಿ ಕರ್ನಾಟಕ ರಾಜ್ಯ ಅಥ್ಲೆಟಿಕ್ಸ್ ಸಂಸ್ಥೆಯ ಅಧ್ಯಕ್ಷರಾಗಿ ನೇಮಕವಾಗಿದ್ದರು.
ಟಿಕೆಟ್ ಖಾತ್ರಿಯಾಗಿದೆ, ರೈ ಮಾತಿನ ಒಳಮರ್ಮವೇನು?
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.