ಕೆಒಎ ಭವನದ ಎದುರು ಬಾಕ್ಸರ್‌ಗಳ ಪ್ರತಿಭಟನೆ

Kannadaprabha News   | Asianet News
Published : Dec 17, 2019, 03:36 PM IST
ಕೆಒಎ ಭವನದ ಎದುರು ಬಾಕ್ಸರ್‌ಗಳ ಪ್ರತಿಭಟನೆ

ಸಾರಾಂಶ

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ಒಲಿಂಪಿಕ್‌ ಭವನ (ಕೆಒಎ) ಎದುರು ಸೋಮವಾರ ಬಾಕ್ಸಿಂಗ್‌ ಸಂಸ್ಥೆ ಪದಾಧಿಕಾರಿಗಳು, ಬಾಕ್ಸರ್‌ಗಳು ಪ್ರತಿಭಟನೆ ನಡೆಸಿದ್ದಾರೆ. ಈ ಕುರಿತಾದ ವರದಿ ಇಲ್ಲಿದೆ ನೋಡಿ...

ಬೆಂಗಳೂರು(ಡಿ.17): ಕರ್ನಾಟಕ ಅಮೆಚೂರ್‌ ಬಾಕ್ಸಿಂಗ್‌ ಸಂಸ್ಥೆ ವಿರುದ್ಧವಾಗಿ ಹೊಸದಾಗಿ ಹುಟ್ಟಿಕೊಂಡಿರುವ ಕರ್ನಾಟಕ ಬಾಕ್ಸಿಂಗ್‌ ಸಂಸ್ಥೆಯನ್ನು ಅನರ್ಹಗೊಳಿಸುವುದರ ಜೊತೆಗೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ಒಲಿಂಪಿಕ್‌ ಭವನ (ಕೆಒಎ) ಎದುರು ಸೋಮವಾರ ಬಾಕ್ಸಿಂಗ್‌ ಸಂಸ್ಥೆ ಪದಾಧಿಕಾರಿಗಳು, ಬಾಕ್ಸರ್‌ಗಳು ಪ್ರತಿಭಟನೆ ನಡೆಸಿದರು.

ಬಾಕ್ಸರ್‌ ಸುಮಿತ್‌, ಶೂಟರ್‌ ರವಿ ಡೋಪಿಂಗ್‌ ಟೆಸ್ಟ್‌ ಫೇಲ್‌!

ಕಾರ‍್ಯದರ್ಶಿಯಾಗಿರುವ ಸಾಯಿ ಸತೀಶ್‌ ಅವರ ಬಂಡಾಯ ಬಾಕ್ಸಿಂಗ್‌ ಸಂಸ್ಥೆ ಡಿ. 16 ರಂದು ಚುನಾವಣೆ ನಡೆಸಿತು. ಇದು ಸರಿಯಾದ ಕ್ರಮವಲ್ಲ. ಅಮೆಚೂರ್‌ ಬಾಕ್ಸಿಂಗ್‌ ಸಂಸ್ಥೆಯ ನಿಯಮದ ಪ್ರಕಾರ 2016ರಲ್ಲಿ ಚುನಾವಣೆ ನಡೆದಿತ್ತು. 

ಶೀಘ್ರದಲ್ಲಿ ಡಿವಿಲಿಯರ್ಸ್ ತಂಡಕ್ಕೆ ವಾಪಸ್; ನಾಯಕ ಡುಪ್ಲೆಸಿಸ್ ಸ್ಪಷ್ಟನೆ!

ಅದರಂತೆ 4 ವರ್ಷಗಳ ಬಳಿಕ ಅಂದರೆ 2020ರಲ್ಲಿ ಚುನಾವಣೆ ನಡೆಯಬೇಕು. ಆದರೆ ಬಂಡಾಯ ಸಂಸ್ಥೆ ಆತುರವಾಗಿ ಚುನಾವಣೆ ನಡೆಸುತ್ತಿರುವುದಕ್ಕೆ ಕಾರಣ ಏನೆನ್ನುವುದು ತಿಳಿದಿಲ್ಲ ಎಂದು ಅಮೆಚೂರ್‌ ಬಾಕ್ಸಿಂಗ್‌ ಸಂಸ್ಥೆ ಕಾರ‍್ಯದರ್ಶಿ ರಾಜ್‌ಕುಮಾರ್‌ ಹೇಳಿದರು. ಕೆಒಎ ಸಹಿತ ಬಂಡಾಯ ಬಾಕ್ಸಿಂಗ್‌ ಸಂಸ್ಥೆಗೆ ಬೆಂಬಲ ನೀಡುತ್ತಿದ್ದು, ಇದು ಸರಿಯಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಂಗಳೂರಿನಲ್ಲಿ ವರ್ಲ್ಡ್ ಟೆನಿಸ್ ಲೀಗ್; ಟೂರ್ನಿಯ ವೇಳಾಪಟ್ಟಿ ಪ್ರಕಟ, ಟಿಕೆಟ್ ಬುಕಿಂಗ್ ಆರಂಭ
ಸತತ ಎರಡನೇ ಬಾರಿಗೆ ಭಾರತ ಮಹಿಳೆಯರಿಗೆ ಒಲಿದ ಕಬಡ್ಡಿ ವಿಶ್ವಕಪ್ ಚಾಂಪಿಯನ್ ಪಟ್ಟ!