ಮಿನಿ ಒಲಿಂಪಿಕ್ಸ್‌ಗೆ ಮುಖ್ಯಮಂತ್ರಿ ಅದ್ಧೂರಿ ಚಾಲನೆ

Kannadaprabha News   | Asianet News
Published : Feb 04, 2020, 09:38 AM ISTUpdated : Feb 04, 2020, 09:39 AM IST
ಮಿನಿ ಒಲಿಂಪಿಕ್ಸ್‌ಗೆ ಮುಖ್ಯಮಂತ್ರಿ ಅದ್ಧೂರಿ ಚಾಲನೆ

ಸಾರಾಂಶ

ಕರ್ನಾಟಕ ಮಿನಿ ಒಲಿಂಪಿಕ್ಸ್ ಕೂಟಕ್ಕೆ ಸೋಮವಾರ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅದ್ಧೂರಿ ಚಾಲನೆ ನೀಡಿದ್ದಾರೆ. ಈ ಕುರಿತಾದ ವಿವರ ಇಲ್ಲಿದೆ ನೋಡಿ...

ಬೆಂಗಳೂರು(ಫೆ.04): ದೇಶದಲ್ಲಿ ಮೊಟ್ಟಮೊದಲ ಬಾರಿಗೆ ಆಯೋಜಿಸಿರುವ 14 ವರ್ಷದೊಳಗಿನ ಮಿನಿ ಒಲಿಂಪಿಕ್ಸ್‌ ಕ್ರೀಡಾ ಕೂಟವನ್ನು ಸೋಮವಾರ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಉದ್ಘಾಟಿಸಿದರು. ‘ಭಾರತದ ಮಿನಿ ಒಲಿಂಪಿಕ್ಸ್‌ ಈಗ ಆರಂಭಗೊಂಡಿದೆ’ ಎಂದು ಘೋಷಿಸುವ ಮೂಲಕ ಚಾಲನೆ ನೀಡಿದರು. 

ಇದಕ್ಕೂ ಮುನ್ನ ರಾಜ್ಯ ಕ್ರೀಡಾ ಸಚಿವರಿಗೆ ರಾಷ್ಟ್ರೀಯ ಕ್ರೀಡಾಪಟುಗಳಾದ ಐಶ್ವರ್ಯಾ, ಅರುಣ್‌ ಶರ್ಮಾ ಕ್ರೀಡಾಜ್ಯೋತಿ ನೀಡಿದರು. ಉದ್ಘಾಟನಾ ಸಮಾರಂಭದಲ್ಲಿ ಕ್ರೀಡಾಪಟುಗಳ ಪಥ ಸಂಚಲನ, ಹುಲಿ ಕುಣಿತ, ಡೊಳ್ಳು ಕುಣಿತ, ಪೂಜಾ ಕುಣಿತ, ವೀರಾಗಾಸೆ ಗಮನ ಸೆಳೆಯಿತು.

ಇಂದಿನಿಂದ ಬೆಂಗಳೂರಲ್ಲಿ ಮಿನಿ ಒಲಿಂಪಿಕ್ಸ್‌ ಕೂಟ

ನಂತರ ಮಾತನಾಡಿದ ಕೆಒಎ ಅಧ್ಯಕ್ಷ ಕೆ. ಗೋವಿಂದರಾಜ್‌, ‘ಪೊಲೀಸ್‌ ಇಲಾಖೆಯಲ್ಲಿ ನೇಮಕಾತಿ ಪ್ರಕ್ರಿಯೆ ನಿಂತಿದೆ. ಅಂ.ರಾ. ಮಟ್ಟದಲ್ಲಿ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ನೇರ ನೇಮಕಾತಿ ಮೂಲಕ ಪೊಲೀಸ್‌ ಇಲಾಖೆಯಲ್ಲಿ ಅವಕಾಶ ಕಲ್ಪಿಸುವಂತಹ ಕಾರ್ಯಗಳನ್ನು ಸರ್ಕಾರ ನಡೆಸಬೇಕು. ಜಿಲ್ಲಾ ಕ್ರೀಡಾಂಗಣಗಳಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಲು ಸರ್ಕಾರ ಮುಂದಾಗಬೇಕು’ ಎಂದರು. ‘ಪ್ರತಿ ವರ್ಷ ಕಿರಿಯರ ಹಾಗೂ ಹಿರಿಯರ ಒಲಿಂಪಿಕ್ಸ್‌ ಆಯೋಜಿಸುವ ಯೋಚನೆ ಹೊಂದಿದ್ದು ಸರ್ಕಾರ ಇದೇ ರೀತಿ ಪ್ರೋತ್ಸಾಹ ನೀಡಬೇಕು’ ಎಂದರು.

ಮೊದಲ ದಿನವಾದ ಸೋಮವಾರ ಫುಟ್ಬಾಲ್‌, ವಾಲಿಬಾಲ್‌, ಹಾಕಿ, ಜುಡೋ, ನೆಟ್‌ಬಾಲ್‌, ಟೆನಿಸ್‌ ಹಾಗೂ ವಾಲಿಬಾಲ್‌ ಸ್ಪರ್ಧೆಗಳು ನಡೆದವು. ಹಾಕಿ ಪಂದ್ಯಗಳ ಬಾಲಕರ ವಿಭಾಗದಲ್ಲಿ ಬಳ್ಳಾರಿ, ಗದಗ ವಿರುದ್ಧ 12-0 ಗೋಲುಗಳಿಂದ ಗೆದ್ದರೇ, ಕೂರ್ಗ್‌ ತಂಡ, ಕಲಬುರ್ಗಿ ವಿರುದ್ಧ 16-0 ಗೋಲುಗಳಿಂದ ಜಯಿಸಿತು.

ಮಕ್ಕಳು ಕ್ರೀಡೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಮೂಲಕ ಮಾನಸಿಕ, ದೈಹಿಕವಾಗಿ ಸದೃಢರಾಗಬೇಕು. ಈ ಮಟ್ಟದಿಂದ ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟಕ್ಕೆ ತಲುಪಬೇಕು. ಕ್ರೀಡೆಗೆ ರಾಜ್ಯ ಸರ್ಕಾರದಿಂದ ಇನ್ನಷ್ಟುಪ್ರೋತ್ಸಾಹ ದೊರೆಯಲಿದೆ.

- ಬಿ.ಎಸ್‌. ಯಡಿಯೂರಪ್ಪ, ಮುಖ್ಯಮಂತ್ರಿ

ಮಿನಿ ಒಲಿಂಪಿಕ್ಸ್‌ ಕ್ರೀಡಾಕೂಟಕ್ಕೆ ಸಾವಿರಾರು ಸಂಖ್ಯೆಯಲ್ಲಿ ಕ್ರೀಡಾಪಟುಗಳು ಆಗಮಿಸಿದ್ದಾರೆ. ಈ ವೇದಿಕೆಯನ್ನು ಬಳಸಿಕೊಂಡು ಮುಂದಿನ ಹಂತಕ್ಕೇರಬೇಕು. ರಾಜ್ಯ, ದೇಶದ ಕೀರ್ತಿ ಹೆಚ್ಚಿಸಲು ಶ್ರಮಿಸಬೇಕು.

- ಕೆ.ಎಸ್‌. ಈಶ್ವರಪ್ಪ, ರಾಜ್ಯ ಕ್ರೀಡಾ ಸಚಿವ
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡೋಪಿಂಗ್‌ಗಿನ್ನು 5 ವರ್ಷ ಜೈಲು, ₹2 ಲಕ್ಷ ದಂಡ: ಕಾಯ್ದೆ ತಿದ್ದುಪಡಿ?
ಮನು ಭಾಕರ್ ವರ್ಸಸ್ ವೈಭವ್ ಸೂರ್ಯವಂಶಿ: ಯುವ ಕ್ರಿಕೆಟರ್‌ ಬಗ್ಗೆ ಕೇಳಿದ ಪ್ರಶ್ನೆಗೆ ಒಲಿಂಪಿಕ್ ವಿಜೇತೆ ಹೇಳಿದ್ದೇನು?