
ನವದೆಹಲಿ(ಮಾ.23): ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಖೇಲೋ ಇಂಡಿಯಾ ಯೋಜನೆ 2025-26ರ ವರೆಗೂ ವಿಸ್ತರಿಸಲಾಗಿದೆ ಎಂದು ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ಸೋಮವಾರ ರಾಜ್ಯಸಭೆಯಲ್ಲಿ ತಿಳಿಸಿದರು.
ದೇಶದ ಯುವ ಕ್ರೀಡಾ ಪ್ರತಿಭೆಗಳನ್ನು ಹುಡುಕುವ ಉದ್ದೇಶದಿಂದ 2018ರಲ್ಲಿ ಆರಂಭಗೊಂಡ ಖೇಲೋ ಇಂಡಿಯಾ ಯೋಜನೆಗೆ 2021-22ರಿಂದ 2025-26ರ ವರೆಗೂ 8,750 ಕೋ
ಟಿ ರು. ಖರ್ಚಾಗಲಿದೆ ಎಂದು ಅಂದಾಜಿಸಲಾಗಿದೆ ಎಂದು ಕ್ರೀಡಾ ಸಚಿವ ಕಿರಣ್ ರಿಜಿಜು ಹೇಳಿದ್ದಾರೆ. ಪ್ರಸಕ್ತ ಸಾಲಿನ ಬಜೆಟ್ನಲ್ಲಿ ಖೇಲೋ ಇಂಡಿಯಾಗೆ 657.71 ಅನುದಾನ ಘೋಷಿಸಲಾಗಿದೆ.
ಓರ್ಲಿಯನ್ಸ್ ಬ್ಯಾಡ್ಮಿಂಟನ್: ಶ್ರೀಕಾಂತ್, ಸೈನಾ ಸ್ಪರ್ಧೆ
ಪ್ಯಾರಿಸ್: ಭಾರತದ ಅಗ್ರ ಶಟ್ಲರ್ಗಳಾದ ಕಿದಂಬಿ ಶ್ರೀಕಾಂತ್ ಹಾಗೂ ಸೈನಾ ನೆಹ್ವಾಲ್ ಇಲ್ಲಿ ಬುಧವಾರದಿಂದ ಆರಂಭಗೊಳ್ಳಲಿರುವ ಓರ್ಲಿಯನ್ಸ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಸ್ಪರ್ಧಿಸಲಿದ್ದು, ಒಲಿಂಪಿಕ್ಸ್ಗೆ ಅರ್ಹತೆ ಪಡೆಯಲು ರ್ಯಾಂಕಿಂಗ್ ಅಂಕಗಳನ್ನು ಕಲೆಹಾಕಲಿದ್ದಾರೆ.
ಲಯದ ಸಮಸ್ಯೆ ಎದುರಿಸುತ್ತಿರುವ ಇಬ್ಬರಿಗೂ ಪ್ರತಿ ಟೂರ್ನಿಯ ಮುಖ್ಯವೆನಿಸಿದ್ದು, ಸಾಧ್ಯವಾದಷ್ಟು ರ್ಯಾಂಕಿಂಗ್ ಅಂಕಗಳನ್ನು ಗಳಿಸಿ, ಅಗ್ರ 38ರೊಳಗೆ ಸ್ಥಾನ ಉಳಿಸಿಕೊಳ್ಳಬೇಕಿದೆ. ಈ ಇಬ್ಬರ ಜೊತೆ ಭಾರತದ ಇನ್ನೂ ಹಲವು ಶಟ್ಲರ್ಗಳು ಟೂರ್ನಿಯಲ್ಲಿ ಕಣಕ್ಕಿಳಿಯಲಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.